ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್ ಬರಲಿಲ್ಲ.ಅಚ್ಚೇದಿನ್ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.