ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್ ಬರಲಿಲ್ಲ.ಅಚ್ಚೇದಿನ್ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…