ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್ ಬರಲಿಲ್ಲ.ಅಚ್ಚೇದಿನ್ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…