ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್ ಬರಲಿಲ್ಲ.ಅಚ್ಚೇದಿನ್ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…