ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಅಚ್ಚೇದಿನ್ ಬರಲಿಲ್ಲ.ಅಚ್ಚೇದಿನ್ ಬಂದಿದ್ದು ಅಂಬಾನಿ, ಅದಾನಿ, ಚೋಕ್ಸಿ, ನೀರವ್ ಮೋದಿಗೆ ಮಾತ್ರ ಎಂದು ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಪರವಾಗಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು,’ ಬಿಜೆಪಿ ಎಂಪಿಗಳು ಏನೂ ಮಾಡಿಲ್ಲ. ನಮಗೆ ವೋಟು ಕೊಡಿ ಅಂತಾ ಕೇಳ್ತಿಲ್ಲ, ಮೋದಿಗೆ ವೋಟು ಕೊಡಿ ಅಂತಿದ್ದಾರೆ. ಜನರು ಈಗಾಗಲೆ ಭ್ರಮನಿರಸನ ಆಗಿದ್ದಾರೆ. ಜನರ ಖಾತೆಗೆ ಹದಿನೈದು ಲಕ್ಷ ಅಂದ್ರು, ಹದಿನೈದು ಪೈಸೆನೂ ಬರಲಿಲ್ಲ. ಅಂತಹದರಲ್ಲಿ ನಿಮ್ಮ ಮುಖ ನೋಡಿ ವೋಟು ಹಾಕಬೇಕಾ ಮೋದಿಯವರೇ? ಎಂದು ಪ್ರಶ್ನಸಿದ್ದಾರೆ.ರಾಜ್ಯದಲ್ಲಿ ಬರಗಾಲ ಇದ್ದಾಗ ಮೋದಿಯವರನ್ನು ಭೇಟಿ ಮಾಡಿದ್ದೆ. ವಿಶೇಷ ಅನುದಾನ ಕೊಡಿ ಅಂತಾ ಕೇಳಿದ್ದೆ. ನರೇಂದ್ರ ಮೋದಿ ಒಂದೇ ಒಂದು ರೂಪಾಯಿ ಅನುದಾನ ಕೊಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…