Advertisement
ಕಾರ್ಯಕ್ರಮಗಳು

ಅಚ್ರಪ್ಪಾಡಿ ಶಾಲೆಯಲ್ಲಿ ಪ್ರತಿಭಾ ದಿನೋತ್ಸವ ಹಾಗೂ ಮೆಟ್ರಿಕ್ ಮೇಳ

Share

ಅಚ್ರಪ್ಪಾಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಚ್ರಪ್ಪಾಡಿ ಇಲ್ಲಿ ಡಿಸೆಂಬರ್ 15 ರಂದು ಪ್ರತಿಭಾ ದಿನೋತ್ಸವ, ಮೆಟ್ರಿಕ್ ಮೇಳ ಮತ್ತು ಪೋಷಕರಿಗೆ ಹಾಗೂ ಊರವರಿಗೆ ಆಟೋಟ ಸ್ಪರ್ಧೆಗಳು ಹಮ್ಮಿಕೊಳ್ಳಲಾಯಿತು.

Advertisement

ಈ ದಿನ ಎಸ್ ಡಿಎಂಸಿ ಅಧ್ಯಕ್ಷ ಹರೀಶ ಕಡಪಳ ಮತ್ತು ಎಲ್ಲಾ ವಿದ್ಯಾರ್ಥಿಗಳು ಸೇರಿ ಮೆಟ್ರಿಕ್ ಮೇಳ ಮತ್ತು ಆಟೋಟ ಸ್ಪರ್ಧೆಯನ್ನು ಉದ್ಘಾಟಿಸಿದರು. ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳು ಲಸ್ಸಿ, ಕಲ್ಲಂಗಡಿ ಜ್ಯೂಸು , ವಿವಿಧ ಸಸ್ಯಗಳು , ಹರಿವೆ ಸೊಪ್ಪು, ಬಸಲೆ, ವಿವಿಧ ಹಣ್ಣುಗಳು ಇತ್ಯಾದಿಗಳನ್ನು ಮಾರಾಟಕ್ಕೆ ಇಟ್ಟುಕೊಂಡಿದ್ದರು. ಆಗಮಿಸಿದ ಪೋಷಕರು ಹಾಗೂ ಊರಿನವರು ವಸ್ತುಗಳನ್ನು ಖರೀದಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಗ್ರಾಮ ಪಂಚಾಯತ್ ದೇವಚಳ್ಳ ಅಧ್ಯಕ್ಷ ದಿವಕರ ಮುಂಡೋಡಿ, ಗ್ರಾಮ ಪಂಚಾಯತ್ ಸದಸ್ಯ ಪುಷ್ಪಕರ, ದೇವಚಳ್ಳ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಂತೋಷ್ ಮತ್ತು ಶ್ರೀ ವಿಷ್ಣು ಯುವಕ ಮಂಡಲ ಮಾವಿನಕಟ್ಟೆಯ ಅಧ್ಯಕ್ಷ ಶ್ರೀಕಾಂತ್ ಮಕ್ಕಳ ಮೆಟ್ರಿಕ್ ಮೇಳ ನೋಡಿ ಹಾಗೂ ವಸ್ತುಗಳನ್ನು ಕೊಂಡುಕೊಳ್ಳುವ ಮೂಲಕ ಉತ್ತೇಜಿಸಿದರು.

ಸಭಾ ಕಾರ್ಯಕ್ರಮದ ಸಭಾಧ್ಯಕ್ಷರಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಕರ ಮುಂಡೋಡಿ, ಗ್ರಾಮ ಪಂಚಾಯತ್ ದೇವಚಳ್ಳ ಸದಸ್ಯ ಪುಷ್ಪಕರ, ಎಸ್ ಡಿಎಂಸಿ ಅಧ್ಯಕ್ಷ ಹರೀಶ್ ಕಡಪಳ, ಶಾಲಾ ವಿದ್ಯಾರ್ಥಿ ನಾಯಕಿ ಲಕ್ಷ್ಯ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಂತೋಷ್ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳನ್ನು ಕಲಶಗಳೊಂದಿಗೆ ಹೂವು ನೀಡಿ ಸ್ವಾಗತಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ನಂತರ ಅತಿಥಿಗಳನ್ನು ಶಿಕ್ಷಕಿ ಸವಿತಾ ಸ್ವಾಗತಿಸಿದರು. ಪ್ರಾಸ್ತಾವಿಕ ಭಾಷಣ ಜಯಶ್ರೀ ಪರಶುರಾಮಾ ನೆರೆವೇರಿಸಿದರು . ನಂತರ 2019 ನೇ ಶೈಕ್ಷಣಿಕ ವರ್ಷದ ವರದಿ ವಾಚನ ಶಾಲೆಯ ಮುಖ್ಯೋಪಾಧ್ಯಾಯರು ಶ್ವೇತಾ. ಕೆ ವಾಚಿಸಿದರು. ಕಲಿಕೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ ಮಾಡಿ ಪ್ರೋತ್ಸಾಹಿಸಲಾಯಿತು.

ತದನಂತರ ಶ್ರೀಕಾಂತ್ ಮಾವಿನಕಟ್ಟೆ, ಅವರು ಈ ಶಾಲೆಯಲ್ಲಿ ಕಳೆದ ದಿನಗಳನ್ನು ನೆನೆಯುತ, ಶಾಲೆಯ ಅಭಿವೃದ್ಧಿಗೆ ಸಹಾಯ ಮಾಡುವಂತೆ ತಿಳಿಸಿದರು. ಕಾರ್ಯಕ್ರಮದ ಸಭಾಧ್ಯಕ್ಷರು, ದಿವಕರ ಮುಂಡೋಡಿರವರು ತಮ್ಮ ಪಂಚಾಯತಿನಿಂದ ಶಾಲೆಗೆ ಅಗತ್ಯತೆ ಪೂರೈಸುವಲ್ಲಿ ಸಹಾಯ ಮಾಡುವುದಾಗಿ ಹೇಳಿದರು. ಸಂತೋಷ್ C.R.P ಹಂತ ಹಂತದ ಶಾಲೆಯ ಬೆಳವಣಿಗೆ ಬಗ್ಗೆ ಹಾಗೂ ಶೈಕ್ಷಣಿಕ ವಿಷಯದ ಕುರಿತು ತಿಳಿಸಿದರು.

ರಮೇಶ ಅವರು ಧನ್ಯವಾದ ಸಲ್ಲಿಸಿದರು. ಎಲ್ಲರಿಗೂ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಮಧ್ಯಾಹ್ನ ಆಹಾರವನ್ನು ಏರ್ಪಡಿಸಲಾಗಿತು. ನಂತರ ಶಾಲಾ ಮಕ್ಕಳಿಂದ ಪಿರಮಿಡ್, ಇಂಗ್ಲಿಷ್ ಅಭಿನಯ ಹಾಡುಗಳು, ನೃತ್ಯ, ಸ್ಕಿಟ್ ಮತ್ತು ಮುಂತಾದವನು ಪ್ರದರ್ಶಿಸಿದರು ಹಾಗೂ ದೇವಾ ಕಾಲೋನಿಯ ಜನರು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟಗೀತೆ ಹಾಡುವ ಮೂಲಕ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

4 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

9 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

9 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

9 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

21 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago