ಸುಳ್ಯ: ಅಜ್ಜಾವರ ಗ್ರಾಮದ ಮಾವಿನಪಳ್ಳ ಶ್ರೀ ಮಹಮ್ಮಾಯಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಂಡು ಬ್ರಹ್ಮಕಲಶದ ಪೂರ್ವಭಾವಿಯಾಗಿ ಸೀಮೆ ದೇವರಾದ ತೊಡಿಕಾನ ಮಲ್ಲಿಕಾರ್ಜುನ ದೇವರ ಆಶೀರ್ವಾದ ಪಡೆಯಲು ಅಜ್ಜಾವರದಿಂದ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ತೊಡಿಕಾನ ಕ್ಷೇತ್ರಕ್ಕೆ ಆಗಮಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ತೊಡಿಕಾನ ಕ್ಷೇತ್ರಕ್ಕೆ ಆಗಮಿಸಿದ ಸಾವಿರಾರು ಭಕ್ತರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಿವಾಕರ ರೈ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತಿತರರು ಸೇರಿ ಸ್ವಾಗತಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಮಾವಿನಪಳ್ಳ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚನಿಯ ಕಲ್ತಡ್ಕ, ಬ್ರಹ್ಮಕಲಶ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಾದ ಸುರೇಶ್ ಕಣೆಮರಡ್ಕ, ಕುಮಾರ್ ರೈ ಮೇನಾಲ, ಪ್ರಬೋದ್ ಶೆಟ್ಟಿ ಮೇನಾಲ, ಬಾಲಕೃಷ್ಣ ಪಿ. ಎಸ್ , ರಾಘವ ಅಜ್ಜಾವರ, ಶೀನಪ್ಪ ಬಯಂಬು ,ರಮೇಶ್ ಇರಂತಮಜಲು, ಸುಭೋದ್ ಶೆಟ್ಟಿ ಮೇನಾಲ, ಭಾಸ್ಕರ ರಾವ್ ಬಯಂಬು, ಮಹೇಶ್ ಮೇನಾಲ, ಲೋಕೇಶ್ ತೋಟಚಾವಡಿ, ರಾಜೇಶ್ ರೈ ಮೇನಾಲ , ಸಾವಿತ್ರಿ ಅಜ್ಜಾವರ, ಮತ್ತಿತರರು ಪಾದಯಾತ್ರೆಯ ನೇತೃತ್ವ ವಹಿಸಿದ್ದರು. ಪಾದಯಾತ್ರೆಯಲ್ಲಿ ಭಜನೆ ನಡೆಯಿತು. ಪಾದಯಾತ್ರೆಗೆ ಸ್ಥಳೀಯರು ಅಲ್ಲಲ್ಲಿ ಸ್ವಾಗತ ನೀಡಿದರು. ಪಾನೀಯ ಮತ್ತು ಲಘು ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…