ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ ಸಂಘದ ಸದಸ್ಯೆ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೀನಾ ಕರುಣಾಕರ ಉಪಸ್ಥಿತರಿದ್ದರು. ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ ಗೌಡ ನವೋದಯ ಸಂಘದ ಬಗ್ಗೆ ಮಾಹಿತಿ ನೀಡಿದರು.
ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನನಿ ನವೋದಯ ಗುಂಪಿನ ಸದಸ್ಯೆ ವೀಣಾ ವಂದಿಸಿದರು. ಸುಮಾರು ನೂರಕ್ಕೂ ಅಧಿಕ ನವೋದಯ ಸಂಘದ ಸದಸ್ಯರು ಸಮವಸ್ತ್ರದಲ್ಲಿ ಪಾಲ್ಗೊಂಡು ಮಾಹಿತಿ ಪಡಕೊಂಡರು. ಲಘು ಉಪಹಾರದ ವ್ಯವಸ್ಥೆಯನ್ನು ಸುಳ್ಯ ಸಿ ಎ ಬ್ಯಾಂಕ್ ವತಿಯಿಂದ ಮಾಡಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…