ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ ಸಂಘದ ಸದಸ್ಯೆ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೀನಾ ಕರುಣಾಕರ ಉಪಸ್ಥಿತರಿದ್ದರು. ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ ಗೌಡ ನವೋದಯ ಸಂಘದ ಬಗ್ಗೆ ಮಾಹಿತಿ ನೀಡಿದರು.
ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನನಿ ನವೋದಯ ಗುಂಪಿನ ಸದಸ್ಯೆ ವೀಣಾ ವಂದಿಸಿದರು. ಸುಮಾರು ನೂರಕ್ಕೂ ಅಧಿಕ ನವೋದಯ ಸಂಘದ ಸದಸ್ಯರು ಸಮವಸ್ತ್ರದಲ್ಲಿ ಪಾಲ್ಗೊಂಡು ಮಾಹಿತಿ ಪಡಕೊಂಡರು. ಲಘು ಉಪಹಾರದ ವ್ಯವಸ್ಥೆಯನ್ನು ಸುಳ್ಯ ಸಿ ಎ ಬ್ಯಾಂಕ್ ವತಿಯಿಂದ ಮಾಡಲಾಯಿತು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…