ಸುಳ್ಯ: ಪೆಬ್ರವರಿ 16 ರಂದು ಅಜ್ಜಾವರ ನವೋದಯ ಸ್ವ ಸಹಾಯ ಸಂಘಕ್ಕೆ ಮಾಹಿತಿ ಕಾರ್ಯಕ್ರಮ ಅಜ್ಜಾವರದ ಅಂಬೇಡ್ಕರ್ ಭವನ ಮೇನಾಲದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನನಿ ನವೋದಯ ಸಂಘದ ಸದಸ್ಯೆ ಮತ್ತು ಗ್ರಾಮ ಪಂಚಾಯತ್ ಸದಸ್ಯೆ ಯಶೋಧ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೀನಾ ಕರುಣಾಕರ ಉಪಸ್ಥಿತರಿದ್ದರು. ನವೋದಯ ಸ್ವ ಸಹಾಯ ಸಂಘದ ತಾಲೂಕು ಮೇಲ್ವಿಚಾರಕರಾದ ತಿಮ್ಮಪ್ಪ ಗೌಡ ನವೋದಯ ಸಂಘದ ಬಗ್ಗೆ ಮಾಹಿತಿ ನೀಡಿದರು.
ವಲಯ ಪ್ರೇರಕರಾದ ಶ್ರೀಧರ ಮಾಣಿಮರ್ಧು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜನನಿ ನವೋದಯ ಗುಂಪಿನ ಸದಸ್ಯೆ ವೀಣಾ ವಂದಿಸಿದರು. ಸುಮಾರು ನೂರಕ್ಕೂ ಅಧಿಕ ನವೋದಯ ಸಂಘದ ಸದಸ್ಯರು ಸಮವಸ್ತ್ರದಲ್ಲಿ ಪಾಲ್ಗೊಂಡು ಮಾಹಿತಿ ಪಡಕೊಂಡರು. ಲಘು ಉಪಹಾರದ ವ್ಯವಸ್ಥೆಯನ್ನು ಸುಳ್ಯ ಸಿ ಎ ಬ್ಯಾಂಕ್ ವತಿಯಿಂದ ಮಾಡಲಾಯಿತು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…