ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.
ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…