ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

Advertisement

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

1 hour ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

9 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

14 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

15 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago