ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

Advertisement
Advertisement

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

16 minutes ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

4 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

16 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago