Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

7 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

7 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

17 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

23 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

23 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago