Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

Advertisement
Advertisement

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

3 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

3 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

8 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

8 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

8 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

10 hours ago