ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.
ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…