ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.
ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…