Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

13 minutes ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

40 minutes ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

53 minutes ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

1 hour ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

1 hour ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

10 hours ago