Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

6 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

6 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

14 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

23 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago