Advertisement
ನಮ್ಮೂರ ಸುದ್ದಿ

ಅಜ್ಜಾವರ-ಮಂಡೆಕೋಲು ರಸ್ತೆ ಡಾಮರೀಕರಣ ಆರಂಭ

Share

ಸುಳ್ಯ: ಅಜ್ಜಾವರ-ಮಂಡೆಕೋಲು-ಅಡೂರು ಅಂತಾರಾಜ್ಯ ರಸ್ತೆಯಲ್ಲಿ ಸುಳ್ಯ-ಅಜ್ಜಾವರ ರಸ್ತೆಯ ಡಾಮರೀಕರಣ ಕಾಮಗಾರಿ ಆರಂಭಗೊಂಡಿದೆ. ಕೇಂದ್ರ ರಸ್ತೆ ನಿಧಿಯಿಂದ ಒಟ್ಟು ಎಂಟು ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದರಲ್ಲಿ ಕಾಂತಮಂಗಲ-ಅಜ್ಜಾವರ ರಸ್ತೆಯಲ್ಲಿ ಆರು ಕಿ.ಮಿ. ರಸ್ತೆ ಆರು ಕೋಟಿ ರೂ ನಲ್ಲಿ ಅಭಿವೃದ್ಧಿಯಾಗುತ್ತಿದೆ. ಉಳಿದ ಎರಡು ಕೋಟಿ ರೂ ವೆಚ್ಚದಲ್ಲಿ ಸುಳ್ಯ-ಉಬರಡ್ಕ ರಸ್ತೆಯಲ್ಲಿ 2.1 ಕಿ.ಮಿ ರಸ್ತೆ ಅಭಿವೃದ್ಧಿ ನಡೆಯಲಿದೆ.

ಸುಳ್ಯ-ಅಜ್ಜಾವರ ರಸ್ತೆಯಲ್ಲಿ ಕಾಂತಮಂಗಲದಿಂದ ಅಜ್ಜಾವರದ ಅಡ್ಪಂಗಾಯವರೆಗೆ ಆರು ಕಿ.ಮಿ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತಿದೆ. ಪ್ರಥಮ ಹಂತದಲ್ಲಿ ಎರಡೂವರೆ ಕಿ.ಮಿ.ಅಭಿವೃದ್ಧಿಯಾಗಿದ್ದು ಮಳೆಗಾಲಕ್ಕೆ ಮುನ್ನ ಡಾಮರೀಕರಣ ಪೂರ್ತಿಯಾಗಲಿದೆ. ಎರಡು ಹಂತದ ಡಾಮರೀಕರಣ ನಡೆಯಲಿದೆ. ರಸ್ತೆ ಒಟ್ಟು ಒಂಭತ್ತು ಮೀಟರ್ ಅಗಲ ಮಾಡಲಾಗುತ್ತಿದ್ದು ಅದರಲ್ಲಿ 5.5 ಮೀಟರ್ ಡಾಮರೀಕರಣ ನಡೆಸಿ ಮಧ್ಯಮ ಪಥ ರಸ್ತೆ ನಿರ್ಮಾಣ ಮಾಡಲಾಗುತಿದೆ. ಅಗತ್ಯವಿದ್ದ ಕಡೆಗಳಲ್ಲಿ ಮೋರಿಗಳನ್ನು ನಿರ್ಮಾಣ ಮಾಡಲಾಗಿದ್ದು 2.5 ಕಿ.ಮಿ. ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಮೋರಿಗಳ ನಿರ್ಮಾಣ ಪೂರ್ತಿಗೊಂಡ ಬಳಿಕ ಡಾಮರೀಕರಣ ಆರಂಭಿಸಲಾಗಿದೆ. ಒಟ್ಟು 315 ಮೀಟರ್ ಕಾಂಕ್ರೀಟ್ ಚರಂಡಿಗಳನ್ನು ಆಯ್ದ ಕಡೆಗಳಲ್ಲಿ ಮಾಡಲಾಗುವುದು. ಇದರಲ್ಲಿ ಕೆಲವು ಕಡೆ ಮೋರಿಯ ಕಾಮಗಾರಿ ಈಗಾಗಲೇ ನಡೆದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

4 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

20 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago