ಅಜ್ಜಾವರ: ಅಜ್ಜಾವರ ಗ್ರಾಮದ ನೆಹರುನಗರದಲ್ಲಿ ತಂಗುಣಿ ಎಂಬ ವೃದ್ದೆಯ ಮನೆಯು ಧಾರಕಾರ ಸುರಿದ ಮಳೆಗೆ ಕುಸಿದುಬಿದ್ದಿದ್ದು ಸ್ಥಳೀಯರು ತಕ್ಷಣ ಸಹಾಯ ಮಾಡಿದ್ದಾರೆ.
ಮನೆ ಕುಸಿತವಾದದ್ದನ್ನು ಗಮನಿಸಿದ ಸ್ಥಳೀಯ ವ್ಯಕ್ತಿ ಅಬ್ದಲ್ ಖಾದರ್ ಅವರು ತಕ್ಷಣವೇ ಸಮಾಜಸೇವಕ ಮಿಧುನ್ ಕರ್ಲಾಪ್ಪಾಡಿಯವರಿಗೆ ತಿಳಿಸಿ ತಕ್ಷಣ ಗ್ರಾಮ ಕಾರಣಿಕರ ಮುಖಾಂತರ ತಹಶಿಲ್ದಾರರ ಗಮನಕ್ಕೆ ತಂದು ಅವರಿಗೆ ಪಡಿತರ ಚೀಟಿ, 94 C ಯ ಮುಖಾಂತರ ಸ್ಧಳವನ್ನು ನೀಡುವುದು ಮತ್ತು ಇನ್ನಿತರ ವ್ಯವಸ್ಥೆಯಗಳನ್ನು ಮಾಡಿಸಿಕೊಟ್ಟು ಇದೀಗ ಒಬ್ಬಂಟಿ ವೃದ್ದೆ ತಂಗುಣಿ ಅವರಿಗೆ ನೆರವಾಗಲು ಒಂದು ದಿನದ ಶ್ರಮಾದಾನದ ಮೂಲಕ ಟರ್ಪಲ್ ಹಾಕಿ ತಾತ್ಕಾಲಿಕ ಛಾವಣಿ ರಚಿಸಿ ನೀಡಲಾಯಿತು.
ಟರ್ಪಲ್ಲನ್ನು ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಎ ಪಿ ಮತ್ತು ಅಬ್ದಲ್ಲ ಅಜ್ಜಾವ ಅವರು ಪಂಚಾಯತ್ ಪರವಾಗಿ ನೀಡಿದರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ಶ್ರಮದಾನದ ಸಂದರ್ಭದಲ್ಲಿ ಭೇಟಿ ನೀಡಿದರು .
ಮುಂದೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದರು ಈ ಶ್ರಮದಾನದಲ್ಲಿ ವಿಶ್ವನಾಧ , ರವಿ , ಬಾಬು , ಮಿಧುನ್ ಕರ್ಲಾಪ್ಪಾಡಿ ,ಅಬ್ದಲ್ ಖಾದರ್ , ಹನೀಫ್ , ಅಬ್ದಲ್ಲ ಮತ್ತಿತರರು ಉಪಸ್ಥಿತಿತರಿದ್ದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…