Advertisement
ಸುದ್ದಿಗಳು

ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

Share

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

5 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

6 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

6 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

14 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

15 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

16 hours ago