ಸುದ್ದಿಗಳು

ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

Advertisement

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

4 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

12 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

13 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

15 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

21 hours ago