Advertisement
ಸುದ್ದಿಗಳು

ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

Share

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

Advertisement

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

22 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

1 day ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

1 day ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

2 days ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

2 days ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 days ago