Advertisement
ಸುದ್ದಿಗಳು

ಅಜ್ಜಾವರ ಹಾಲು ಸೊಸೈಟಿಗೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ

Share

ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.

ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್  ಮತ್ತು ತ್ರೀವೇಣಿ  ಆಗಮಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

5 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

6 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

13 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

19 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

19 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago