ಅಜ್ಜಾವರ:ಅಜ್ಜಾವರ ಹಾಲು ಉತ್ಪಾದಕರ ಸಂಘಕ್ಕೆ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.
ಅಜ್ಜಾವರ ಹಾಲು ಉತ್ಪಾದಕರ ಸಹಕಾರಿ ಸಂಘದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಹಕಾರಿ ಸಂಘಗಳ ಉಪನಿಬಂಧಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಅವಿಶ್ವಾಸ ಮಂಡನೆ ಸಹಿತ ಇತರ ವಿಚಾರಗಳ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದೇ ಸಂದರ್ಭ ಸಹಕಾರಿ ಸಂಘಗಳ ಉಪನಿಬಂಧಕರು ಸಂಘದ ಕಚೇರಿಯಲ್ಲಿ ನಿರ್ದೇಶಕರು ಮತ್ತು ಸದಸ್ಯರನ್ನು ಒಳಗೊಂಡ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಮಾತನಾಡಿ, ಕಾನೂನು ಮೀರಿ ಯಾವುದೂ ಕೂಡಾ ನಡೆಯಲು ಸಾಧ್ಯವಿಲ್ಲ, ಇದಕ್ಕಾಗಿ ಒತ್ತಡ ತಂದರೂ ಆಗದು. ಕಾನೂನು ಚೌಕಟ್ಟು ಒಳಗಡೆ ಸಹಕಾರಿ ಸಂಘದ ಕೆಲಸಗಳು ನಡೆಯಬೇಕು, ಆಡಳಿತ ಮಂಡಳಿ, ಕೃಷಿಕರು, ಹೈನುಗಾರರ ನಡುವೆ ಸಮನ್ವಯತೆ ಬೇಕು ಎಂದು ಸೂಚಿಸಿದರು.
ಈ ಸಂದರ್ಭ ಸಂಘದ ಅಧ್ಯಕ್ಷ ರಾಹುಲ್ ಅಡ್ಪಂಗಾಯ, ಉಪಾಧ್ಯಕ್ಷ ದುರ್ಗೇಶ್ ಅಡ್ಪಾಂಗಾಯ, ಕಾರ್ಯದರ್ಶಿ ಚೈತ್ರ, ರವೀಶ್ ಮಾವಿನಪಳ್ಳ , ಬಾಲಚಂದ್ರ ಮುಡೂರು , ಶಾಂತಪ್ಪ , ಲೀಲಾವತಿ ,ನಾರಾಯಣ, ಪೂರ್ಣಿಮ ,ಭಾಗೀರಥಿ , ಅಬ್ಬಾಸ್ , ಗ್ರಾಮ ಪಂಚಾಯತ್ ಸದಸ್ಯರಾದ ಕರುಣಾಕರ ಅಡ್ಪಂಗಾಯ , ಗಣೇಶ್ , ಮಾಜಿ ಸದಸ್ಯರಾದ ಚಂದ್ರಶೇಖರ , ಮತ್ತಿತರು ಉಪಸ್ಥಿತರಿದ್ದರು ಮತ್ತು ಸಂಘದ ಸರ್ವಸದಸ್ಯರು ಹಾಜರಿದ್ದರು. ಸಹಕಾರಿ ಸಂಘಗಳ ಇಲಾಖೆಯಿಂದ ಮಂಜುನಾಧ್ ಮತ್ತು ತ್ರೀವೇಣಿ ಆಗಮಿಸಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…