Exclusive - Mirror Hunt

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ ಮಾಹಿತಿ ನೀಡಿದರು.

Advertisement

ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಈ ವರೆಗೆ ಲಭ್ಯಇರುವಕೊಯ್ಲು ದೋಂಟಿಗಳಿಂದ ಇದು ವಿಭಿನ್ನವಾಗಿದ್ದು, ಯಾವುದೇ ಇಂಧನ ಅಥವಾ ವಿದ್ಯುತ್ ಬಳಸದೆ ಸುಲಭದಲ್ಲಿ ಉಪಯೋಗಿಸಬಹುದು. ಕ್ಯಾಂಪ್ಕೋದ ಅಡಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ದೋಂಟಿ ಬಳಕೆಗೆ ಸೂಕ್ತ ಪ್ರೋತ್ಸಾಹ ನೀಡಲು ಪ್ರಯತ್ನಿಸಲಾಗುವುದು.ರೈತರಗೆ ಇದು ವರದಾನವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದರು.

 

ದೋಂಟಿ ಸಂಶೋಧಕಹಾಗೂ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಮಾತನಾಡಿ, ಮಲೆನಾಡು ಪ್ರದೇಶದ ತೋಟಗಳಲ್ಲಿ ಈಗಾಗಲೆ ಇಪ್ಪತ್ತಕ್ಕೂ ಹೆಚ್ಚು ಇಂತಹ ದೋಂಟಿಗಳು ಬಳಕೆಯಲ್ಲಿವೆ. ಇದರಿಂದಾಗಿ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೆ ತಿಂಗಳಿಗೆ 70,000ರೂ. ಉಳಿತಾಯವಾಗುತ್ತದೆ ಎಂದು ಹೇಳಿದರು.
ಪ್ರಸಕ್ತದೋಂಟಿಯ ಬೆಲೆ 80,000ರೂ.ಆಗಿದ್ದು ಮುಂದೆರೈತರಿಗೆಕೈಗೆಟಕುವ ಮಿತದರದಲ್ಲಿ ಸಾಧಾರಣ ಹತ್ತು ಸಾವಿರರೂ.ಗೆದೊರಕುವಂತೆ ಮಾಡಲಾಗುವುದುಎಂದು ಬಾಲಸುಬ್ರಹ್ಮಣ್ಯ ಭರವಸೆ ನೀಡಿದರು.

Advertisement

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಮತ್ತುಕೃಷಿ ವಿಭಾಗದಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

ದೋಂಟಿಯ ವಿಶೇಷತೆಗಳು:

• ಅಡಿಕೆ ಮರಏರದೆಕೊಯ್ಲು ಹಾಗೂ ಔಷಧಿ ಸಿಂಪಡಣೆ ಮಾಡಬಹುದು.
• 60 ರಿಂದ 80 ಅಡಿ ಎತ್ತರದದೋಂಟಿಅಗತ್ಯಕ್ಕೆ ಬೇಕಾದಷ್ಟು ಎತ್ತರಿಸಿ ಲಾಕ್ ಮಾಡುವ ವ್ಯವಸ್ಥೆ.
• ನಿಂತಲ್ಲೆ 360 ಡಿಗ್ರಿ ಸುತ್ತಮುತ್ತ ಹತ್ತು ಮರಗಳಿಗೆ ಔಷಧಿ ಸಿಂಪಡಣೆ ಸಾಧ್ಯ.
• ಫೈಬರ್  ತಂತ್ರಜ್ಞಾನ ಬಳಕೆ.  20 ವರ್ಷ ಬಾಳಿಕೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ

ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…

38 minutes ago

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…

20 hours ago

ಆಧುನಿಕ ಯುಗದಲ್ಲಿ ತಂತ್ರಜ್ಞ ದಲ್ಲಾಳಿಗಳು

ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…

1 day ago

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…

1 day ago

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…

2 days ago

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…

2 days ago