Exclusive - Mirror Hunt

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ ಮಾಹಿತಿ ನೀಡಿದರು.

Advertisement
Advertisement

ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಈ ವರೆಗೆ ಲಭ್ಯಇರುವಕೊಯ್ಲು ದೋಂಟಿಗಳಿಂದ ಇದು ವಿಭಿನ್ನವಾಗಿದ್ದು, ಯಾವುದೇ ಇಂಧನ ಅಥವಾ ವಿದ್ಯುತ್ ಬಳಸದೆ ಸುಲಭದಲ್ಲಿ ಉಪಯೋಗಿಸಬಹುದು. ಕ್ಯಾಂಪ್ಕೋದ ಅಡಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ದೋಂಟಿ ಬಳಕೆಗೆ ಸೂಕ್ತ ಪ್ರೋತ್ಸಾಹ ನೀಡಲು ಪ್ರಯತ್ನಿಸಲಾಗುವುದು.ರೈತರಗೆ ಇದು ವರದಾನವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದರು.

 

ದೋಂಟಿ ಸಂಶೋಧಕಹಾಗೂ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಮಾತನಾಡಿ, ಮಲೆನಾಡು ಪ್ರದೇಶದ ತೋಟಗಳಲ್ಲಿ ಈಗಾಗಲೆ ಇಪ್ಪತ್ತಕ್ಕೂ ಹೆಚ್ಚು ಇಂತಹ ದೋಂಟಿಗಳು ಬಳಕೆಯಲ್ಲಿವೆ. ಇದರಿಂದಾಗಿ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೆ ತಿಂಗಳಿಗೆ 70,000ರೂ. ಉಳಿತಾಯವಾಗುತ್ತದೆ ಎಂದು ಹೇಳಿದರು.
ಪ್ರಸಕ್ತದೋಂಟಿಯ ಬೆಲೆ 80,000ರೂ.ಆಗಿದ್ದು ಮುಂದೆರೈತರಿಗೆಕೈಗೆಟಕುವ ಮಿತದರದಲ್ಲಿ ಸಾಧಾರಣ ಹತ್ತು ಸಾವಿರರೂ.ಗೆದೊರಕುವಂತೆ ಮಾಡಲಾಗುವುದುಎಂದು ಬಾಲಸುಬ್ರಹ್ಮಣ್ಯ ಭರವಸೆ ನೀಡಿದರು.

Advertisement

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಮತ್ತುಕೃಷಿ ವಿಭಾಗದಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

ದೋಂಟಿಯ ವಿಶೇಷತೆಗಳು:

• ಅಡಿಕೆ ಮರಏರದೆಕೊಯ್ಲು ಹಾಗೂ ಔಷಧಿ ಸಿಂಪಡಣೆ ಮಾಡಬಹುದು.
• 60 ರಿಂದ 80 ಅಡಿ ಎತ್ತರದದೋಂಟಿಅಗತ್ಯಕ್ಕೆ ಬೇಕಾದಷ್ಟು ಎತ್ತರಿಸಿ ಲಾಕ್ ಮಾಡುವ ವ್ಯವಸ್ಥೆ.
• ನಿಂತಲ್ಲೆ 360 ಡಿಗ್ರಿ ಸುತ್ತಮುತ್ತ ಹತ್ತು ಮರಗಳಿಗೆ ಔಷಧಿ ಸಿಂಪಡಣೆ ಸಾಧ್ಯ.
• ಫೈಬರ್  ತಂತ್ರಜ್ಞಾನ ಬಳಕೆ.  20 ವರ್ಷ ಬಾಳಿಕೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

5 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

7 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

9 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

10 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

10 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago