Advertisement
Exclusive - Mirror Hunt

ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಹೈಟೆಕ್‍ ದೋಂಟಿ: ಧರ್ಮಸ್ಥಳದಲ್ಲಿ ಪ್ರಾತ್ಯಕ್ಷಿಕೆ

Share

ಧರ್ಮಸ್ಥಳ: ಅಡಿಕೆಕೊಯ್ಲು ಮತ್ತು ಬೋರ್ಡೊದ್ರಾವಣ ಸಿಂಪಡಣೆಗೆ ಅಮೇರಿಕಾದಲ್ಲಿರುವ ಹಾಸನ ಮೂಲದ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಅವರು ಸುಧಾರಿತ ಹೈಟೆಕ್‍ದೋಂಟಿ ಸಂಶೋಧನೆ ಮಾಡಿದ್ದು  ಶುಕ್ರವಾರ ಧರ್ಮಸ್ಥಳದಲ್ಲಿರುವ ಹರ್ಪಾಡಿತೋಟದಲ್ಲಿ ಪ್ರಾತ್ಯಕ್ಷಿಕೆಯೊಂದಿಗೆ ಸವಿವರ ಮಾಹಿತಿ ನೀಡಿದರು.

Advertisement

ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಈ ವರೆಗೆ ಲಭ್ಯಇರುವಕೊಯ್ಲು ದೋಂಟಿಗಳಿಂದ ಇದು ವಿಭಿನ್ನವಾಗಿದ್ದು, ಯಾವುದೇ ಇಂಧನ ಅಥವಾ ವಿದ್ಯುತ್ ಬಳಸದೆ ಸುಲಭದಲ್ಲಿ ಉಪಯೋಗಿಸಬಹುದು. ಕ್ಯಾಂಪ್ಕೋದ ಅಡಿಕೆ ಸಂಶೋಧನಾ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ದೋಂಟಿ ಬಳಕೆಗೆ ಸೂಕ್ತ ಪ್ರೋತ್ಸಾಹ ನೀಡಲು ಪ್ರಯತ್ನಿಸಲಾಗುವುದು.ರೈತರಗೆ ಇದು ವರದಾನವಾಗಿದೆ ಎಂದು ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದರು.

 

ದೋಂಟಿ ಸಂಶೋಧಕಹಾಗೂ ಎಂಜಿನಿಯರ್ ಬಾಲಸುಬ್ರಹ್ಮಣ್ಯ ಮಾತನಾಡಿ, ಮಲೆನಾಡು ಪ್ರದೇಶದ ತೋಟಗಳಲ್ಲಿ ಈಗಾಗಲೆ ಇಪ್ಪತ್ತಕ್ಕೂ ಹೆಚ್ಚು ಇಂತಹ ದೋಂಟಿಗಳು ಬಳಕೆಯಲ್ಲಿವೆ. ಇದರಿಂದಾಗಿ ಕೂಲಿಕಾರ್ಮಿಕರ ಸಮಸ್ಯೆ ನಿವಾರಣೆಯಾಗುವುದಲ್ಲದೆ ತಿಂಗಳಿಗೆ 70,000ರೂ. ಉಳಿತಾಯವಾಗುತ್ತದೆ ಎಂದು ಹೇಳಿದರು.
ಪ್ರಸಕ್ತದೋಂಟಿಯ ಬೆಲೆ 80,000ರೂ.ಆಗಿದ್ದು ಮುಂದೆರೈತರಿಗೆಕೈಗೆಟಕುವ ಮಿತದರದಲ್ಲಿ ಸಾಧಾರಣ ಹತ್ತು ಸಾವಿರರೂ.ಗೆದೊರಕುವಂತೆ ಮಾಡಲಾಗುವುದುಎಂದು ಬಾಲಸುಬ್ರಹ್ಮಣ್ಯ ಭರವಸೆ ನೀಡಿದರು.

ಧರ್ಮಸ್ಥಳದ ಡಿ. ಹರ್ಷೇಂದ್ರಕುಮಾರ್ ಮತ್ತುಕೃಷಿ ವಿಭಾಗದಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

ದೋಂಟಿಯ ವಿಶೇಷತೆಗಳು:

• ಅಡಿಕೆ ಮರಏರದೆಕೊಯ್ಲು ಹಾಗೂ ಔಷಧಿ ಸಿಂಪಡಣೆ ಮಾಡಬಹುದು.
• 60 ರಿಂದ 80 ಅಡಿ ಎತ್ತರದದೋಂಟಿಅಗತ್ಯಕ್ಕೆ ಬೇಕಾದಷ್ಟು ಎತ್ತರಿಸಿ ಲಾಕ್ ಮಾಡುವ ವ್ಯವಸ್ಥೆ.
• ನಿಂತಲ್ಲೆ 360 ಡಿಗ್ರಿ ಸುತ್ತಮುತ್ತ ಹತ್ತು ಮರಗಳಿಗೆ ಔಷಧಿ ಸಿಂಪಡಣೆ ಸಾಧ್ಯ.
• ಫೈಬರ್  ತಂತ್ರಜ್ಞಾನ ಬಳಕೆ.  20 ವರ್ಷ ಬಾಳಿಕೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

7 hours ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

7 hours ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

7 hours ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

7 hours ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

7 hours ago

ಕೃಷಿ ಮಣ್ಣು ಸಾಗಾಟಕ್ಕೆ ತೊಂದರೆ ಕೊಡಬೇಡಿ ; ಅಧಿಕಾರಿಗಳಿಗೆ ಸಂಸದ ಕೋಟ ಸೂಚನೆ

ಕೃಷಿ ಉದ್ದೇಶಕ್ಕಾಗಿ ಮಣ್ಣು ಸಾಗಾಟ ಮಾಡುವ ರೈತರಿಗೆ ತೊಂದರೆ ಕೊಡಬಾರದು ಎಂದು ಉಡುಪಿ…

7 hours ago