Advertisement
ಅನುಕ್ರಮ

ಅಡಿಕೆಗೆ ಕೊಳೆರೋಗ ಬಂದಾಯಿತು…!

Share

ಮಳೆ ಕಡಿಮೆ ಎಂದು ಬಹುತೇಕ ಕೃಷಿಕರು ಕೊಳೆರೋಗ ಬರುವ ಭಯವಿಲ್ಲವೆಂದು ನಿರಾಳವಾಗಿದ್ದರು. ಮೇ ತಿಂಗಳಿನಲ್ಲಿಯೇ ಮೊದಲ ಸಲ ಬೋರ್ಡೊ ಸಿಂಪಡಣೆ ಮಾಡುತ್ತಿದ್ದವರು ಮಳೆ ಬರಲಿ ಆ ಮೇಲೆ ನೋಡೋಣ ಅಂದವರಿದ್ದರು. ಜೂನ್ ತಿಂಗಳಿನಲ್ಲಿಯೂ ಮಳೆಗಾಲದ ವಾತಾವರಣವೇ ಇರಲಿಲ್ಲ. ಜುಲೈ ತಿಂಗಳಿನ ನಂತರ ಮಳೆ ಸಾಕೋ ಬೇಕೋ ಅಂತ ಕೇಳುತ್ತಿದೆ. ಅಂದು ನೀರಿಲ್ಲದೆ ಬರದಿಂದ ಅಡಿಕೆ ಕೃಷಿ ಕಂಗಾಲಾಯಿತು. ಕೈಗೆ ಸಿಗಬೇಕಾದ ಫಸಲು ಹಿಂಗಾರ ಒಣಗಿ ಸುಟ್ಟುಹೋಯಿತು. ಈಗ ಮಳೆಗಾಲ ಮಿತಿಮೀರಿ ಬಂದು ಅಳಿದುಳಿದ ಫಸಲನ್ನು ಆಪೋಶನ ತೆಗೆದುಕೊಳ್ಳುತ್ತಿದೆ. ಈ ಲೇಖನ ತಯಾರಾಗುವ ಹೊತ್ತಿಗೆ ಹನಿಕಡಿಯದೆ ಎರಡು ದಿನಗಳಿಂದ ಮಳೆ ಬರುತ್ತಾ ಇದೆ.ಮಳೆ ಬರುವುದೆಂದರೆ ಅಡಿಕೆ ತೋಟಕ್ಕೆ ಕೊಳೆರೋಗ ಹತ್ತಿಕೊಳ್ಳಲು ಬೇಕಾದ ಸಕಲ ಲಕ್ಷಣಗಳನ್ನು ಹೊತ್ತುಕೊಂಡೇ ಬರುತ್ತಿದೆ. ಇದು ಇನ್ನೆರಡು ದಿವಸಕ್ಕೆ ಎಳೆದು ಬಿಟ್ಟರೆ ಕೃಷಿಕನ ಭವಿಷ್ಯಕ್ಕೆ ಬೇರೆ ಬರೆ ಬೇಡ.

 

ಸಾಮಾನ್ಯವಾಗಿ ಮೇ ತಿಂಗಳಿನಲ್ಲಿ ಮೊದಲ ಸಿಂಪಡಣೆ ಕೃಷಿಕರು ಕೊಡುತ್ತಿದ್ದರು. ಈ ವರ್ಷ ಆ ಹೊತ್ತಿಗೆ ಭಾರಿ ಬಿಸಿಲು. ಮಳೆಯ ಯಾವ ಲಕ್ಷಣಗಳೂ ಇರಲಿಲ್ಲ. ಮಳೆ ಬಾರದೆ ಸಿಂಪಡಣೆ ಕೊಟ್ಟರೆ ಹಾನಿಯಾದೀತೆಂದು ಕೃಷಿಕರು ಹೆದರಿದ್ದು ಸಹಜ. ಮತ್ತೆ ಮಳೆ ಬಂದಾಗ ಬಿರುಸಿನ ಮಳೆ ಇಲ್ಲ. ಗಡಿಬಿಡಿ ಯಾಕೆ ಅಂತ ಕೃಷಿಕರಲ್ಲಿ ಕೆಲವರು ಉದಾಸೀನ ಮಾಡಿದ್ದಿದೆ. ಆದರೆ ಹಲವರು ಮರ ಹತ್ತುವ ಕುಶಲ ಕರ್ಮಿಗಳು ಬಂದಾಗ ಸಿಂಪಡಣೆ ಮಾಡಿಸಿಬಿಟ್ಟರು. ಅಂದು ಸಿಂಪಡಣೆ ಮಾಡದವರಿಗೆ ಮತ್ತು ಮಾಡಿದವರಿಗೆ ಈಗ ಬಂದ ಪರಿಸ್ಥಿತಿ ಒಂದೆ. ಮೊದಲ ಸಿಂಪಡಣೆ ಮಾಡಿಸಿದವರಿಗೆ ಮತ್ತೆ ಸಿಂಪಡಣೆಗೆ ದಿನವಾಗಿ ಕಳೆಯಿತು. ಮಳೆಯ ಈ ವರ್ಷದ ಕ್ರಮದಿಂದ ಕೃಷಿಕರಿಗೆ ಗೊಂದಲವೂ ಆಯಿತು ಸಮಸ್ಯೆಯೂ ಆಯಿತು.
ಕೃಷಿಕರೇ ಮುನ್ನಡೆಸುತ್ತಿರುವ ಸಾಮಾಜಿಕ ಜಾಲತಾಣಗಳಲ್ಲಿ ಈಗ ಕೊಳೆರೋಗದ್ದೇ ಸುದ್ಧಿ. ಬೇಸಿಗೆಯಲ್ಲಿ ಅನಾವೃಷ್ಠಿ. ಈಗ ಅತಿವೃಷ್ಠಿ. ಬಾಣಲೆಯಿಂದ ಒಲೆಯ ಬೆಂಕಿಗೆ ಬಿದ್ದ ಸ್ಥಿತಿ ಎಂಬ ಬಣ್ಣನೆ. ನೋವು, ನಿರಾಶೆ, ಹತಾಶೆ ಎಲ್ಲವೂ ಸಹಜ. ಯಾಕೆಂದರೆ ನಾಳೆಯ ಬದುಕನ್ನು ಕಟ್ಟಿಕೊಡುವ ಫಸಲು ನೆಲ ಸೇರಿದಾಗ ಆತಂಕ ಇದ್ದದ್ದೆ. ಆದರೆ ಇಲ್ಲೆಲ್ಲ ನಾವು ಗಮನಿಸ ಬೇಕಾದ ಇನ್ನಷ್ಟು ವಿಷಯಗಳಿವೆ. ಕೃಷಿಕರಾದ ನಮಗೆಲ್ಲ ಒಂದಷ್ಟು ಉದಾಸೀನ ಅಂಟಿಕೊಂಡಿದೆ. ನಮ್ಮ ಹಿರಿಯರು ಕಷ್ಟ ಪಟ್ಟು ನಮಗಾಗಿ ಬೆಳೆದ ತೋಟ, ಸಂಪತ್ತುಗಳನ್ನು ಮತ್ತು ನಮ್ಮದೇ ಭೂಮಿಯನ್ನು ನಾವು ಪ್ರೀತಿಯಿಂದ ನೋಡುವಲ್ಲಿ ಯಾವುದೊ ತೊಡಕುಗಳು ಬಂದುಬಿಟ್ಟಂತಿದೆ. ಕೃಷಿಯ ಬಗ್ಗೆ ಇರುವ ಪ್ರೀತಿ ಹೊರಟುಹೋಗಿ ಅದರ ಆದಾಯದ ಬಗ್ಗೆ ಉತ್ಸಾಹ ಬಂದು ಬಿಟ್ಟಿದೆ. ಸಮಯಕ್ಕೆ ಆಗಬೇಕಾದ ಕೆಲಸಗಳು ಆಗದೆ ಏನೆಲ್ಲ ಆಗುವುದೆ ಕೃಷಿಕರು ಹೆಚ್ಚು ಸಮಸ್ಯೆಗಳನ್ನು ಎದುರಿಸುವಂತಾಗಲು ಕಾರಣ. ಕಾರ್ಮಿಕರ ಜೊತೆ ಜೊತೆಗೆ ದುಡಿಯುವ ಕೃಷಿಕರಿದ್ದಲ್ಲಿ ಸಮಸ್ಯೆಗಳು ಕಡಿಮೆ. ಕಾರ್ಮಿಕರಲ್ಲಿ ಅದು ಇದು ಕೆಲಸ ಹೇಳಿ ಹೋಗುವ ಪ್ರಾಯೋಗಿಕ ಅನುಭವ ಇಲ್ಲದ ಕೃಷಿಕರ ಕೃಷಿಯಲ್ಲಿ ಸಮಸ್ಯೆಗಳು ಅಧಿಕ. ಅನೇಕ ಸಂದರ್ಭಗಳಲ್ಲಿ ಕೊಳೆರೋಗ ಕಾಲಿಡಲು ಅಸಮರ್ಪಕ ಕೆಲಸಗಳ ನಿರ್ವಹಣೆಯೂ ಕಾರಣವಾಗುವುದು ಇದೆ. ಮೊನ್ನೆ ಒಂದು ತೋಟದಲ್ಲಿ ನಾಲ್ಕು ಅಡಿಕೆ ಮರಕ್ಕೆ ಮಾತ್ರ ಕೊಳೆರೋಗ ಎರಗಿಬಿಟ್ಟಿತ್ತು. ಉಳಿದ ಯಾವ ಮರಗಳಲ್ಲಿಯೂ ಕಾಣದ ರೋಗ ಅದಕ್ಕೆ ಯಾಕೆ ಬಂತು ಅಂತ ಪರಿಶೀಲನೆ ಮಾಡಿದಾಗ ಅ ನಾಲ್ಕು ಮರಗಳ ಸೋಗೆಗಳು ಬಾಗಿತ್ತು. ಬಾಗಿದ ಸೋಗೆಯ ಒಳಗೆ ಇದ್ದ ಕಾಣದ ಗೊನೆಗಳಿಗೆ ಸಿಂಪಡಣೆ ಮಾಡಲು ಮರೆತರೊ ಅಥವ ಉದಾಸೀನ ಮಾಡಿದರೊ ಗೊತ್ತಿಲ್ಲ. ದೊಡ್ಡ ತೋಟಕ್ಕೆ ಕೊಳೆರೋಗ ಕಾಲಿಡಲು ಅ ನಾಲ್ಕು ಮರಗಳೇ ಬಾಗಿಲುಗಳಾದವು.

(ಸಾಂದರ್ಭಿಕ ಚಿತ್ರ)

ಬೋರ್ಡೊ ದ್ರಾವಣ ತಯಾರಿಯಲ್ಲಿ, ಅಡಿಕೆ ಮರದ ಗೊನೆಗಳ ಮೇಲ್ಭಾಗದ ಮುತ್ತಿಗೆ ಸಿಂಪಡಣೆ ತಾಗಿಸುವಲ್ಲಿ, ತೋಟದ ಕರೆಬರಿಗಳಲ್ಲಿ ಇರುವ ಮರಗಳ ಆಚೆ ಬದಿಯ ಗೊನೆಗಳಿಗೆ ಸಿಂಪಡಣಾ ದ್ರಾವಣ ತಾಗಿಸುವಲ್ಲಿ ಇರುವ ಉದಾಸೀನ ಮತ್ತು ನಿರ್ಲಕ್ಷ್ಯ ಕೊಳೆರೋಗಕ್ಕೆ ಆಹ್ವಾನ ಕೊಡುತ್ತದೆ. ನಮಗೆಲ್ಲ ಅರಿವಿದೆ. ಆದರೆ ಸಿಂಪಡಣೆ ಮಾಡುವ ಹೊತ್ತಿಗೆ ನಮ್ಮ ಮೈಮೇಲೆ ಮದ್ದು ಬೀಳುತ್ತದೆ ಎಂದು ತೋಟಕ್ಕಿಳಿಯದೆ ಮನೆಯಿಂದಲೇ ಕಾರ್ಬಾರು ಮಾಡಿದ್ದರ ಫಲ ನಾವೇ ಉಣ್ಣಬೇಕಾಗುತ್ತದೆ. ಬಹುತೇಕ ಕೃಷಿಕರು ತಮ್ಮ ಅಮೂಲ್ಯ ಸಮಯವನ್ನು ಮೊಬೈಲ್‍ಗಾಗಿ ವಿನಿಯೋಗಿಸುವುದಿದೆಯಲ್ಲ ಇದೊಂದೇ ಕೃಷಿಯ ಅವನತಿಗೆ ಸಾಕು. ಬೆಳಿಗ್ಗೆ ಎದ್ದ ಕೂಡಲೇ ಅರಂಭಿಸುವ ಕೆಲಸ ರಾತ್ರೆ ಹನ್ನೊಂದಾದರೂ ಕೆಲವರಿಗೆ ನಿದ್ದೆ ತರಿಸುವುದು ಕಡಿಮೆ. ಇಂತಹ ಉದಾಸೀನ, ನಿರ್ಲಕ್ಷ್ಯ ನಾಳೆಯ ದಿನಗಳನ್ನು ಇನ್ನಷ್ಟು ಕಠಿಣಗೊಳಿಸೀತು. ಕೊಳೆರೋಗ ಊರಿಗೆ ಕಾಲಿಟ್ಟ ಸಮಯದಲ್ಲಿ ಯುದ್ಧೋತ್ಸಾಹದಲ್ಲಿರಬೇಕಾದವರು ತಣ್ಣಗಿದ್ದರೆ ಭವಿಷ್ಯ ಡೋಲಾಯಮಾನ ಖಂಡಿತ.

ಶಂಕರನಾರಾಯಣ ಖಂಡಿಗೆ
‘ಶ್ಯಾಮಕೃಪಾ’ ನಾಗೋಡಿ
ಅಂಚೆ : ಪೆರ್ಲ – 671552
ಕಾಸರಗೋಡು ಜಿಲ್ಲೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಶಂ. ನಾ. ಖಂಡಿಗೆ

ಕೃಷಿಕ, ಬರಹಗಾರರು

Published by
ಶಂ. ನಾ. ಖಂಡಿಗೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

20 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago