Advertisement
ರಾಷ್ಟ್ರೀಯ

ಅಡಿಕೆಯ ಬಗ್ಗೆ ಲೋಕಸಭೆಯಲ್ಲಿ ಮತ್ತೆ ವ್ಯತಿರಿಕ್ತ ಉತ್ತರ : ಅಡಿಕೆ ಬೆಳೆಗಾರರ ಪ್ರದೇಶದ ಸಂಸದರು ಮೌನ…!?

Share

ಮಂಗಳೂರು: ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮತ್ತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ  ಉತ್ತರ ನೀಡಿದೆ. ಲೋಕಸಭೆಯಲ್ಲಿ ಸಂಸದ ದೇವುಸಿಂಗ್ ಜೆಸಿಂಗ್‌ಭಾಯ್ ಚೌಹಾಣ್ ಅವರ ಪ್ರಶ್ನೆಗೆ  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್  ವಿವರವಾದ ಉತ್ತರವನ್ನು ನೀಡುತ್ತಾ ಅಡಿಕೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಹೇಳಿದೆ. ಈ ಬಗ್ಗೆ ಅಡಿಕೆ ಬೆಳೆಗಾರರ ಪ್ರದೇಶದ ಸಂಸದರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಮತ್ತೆ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗುವರೇ ಎಂಬ ಸಂದೇಹ ಕಾಡಿದೆ. 

ಲೋಕಸಭೆಯಲ್ಲಿ  ಪ್ರಶ್ನೆಗಳನ್ನು ಉಲ್ಲೇಖಿಸಿದ ಸಂಸದ ದೇವು ಸಿಂಗ್, ಅಡಿಕೆ ಸೇವನೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬ ವರದಿ ಇದೆ ಹಾಗಿದ್ದರೆ ಅದರ ವಿವರಗಳು , ಭಾರತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವಿಧಿಸಿರುವ ನಿಬಂಧನೆಗಳು ಗುಟ್ಕಾ, ಪ್ಯಾನ್ ಮಸಾಲಾ ಮತ್ತು ಇತರ  ವಸ್ತುಗಳ ಮೇಲೆ ಕೈಗೊಂಡಿರುವ ಕ್ರಮಗಳು ಸೇರಿದಂತೆ 4 ಉಪಪ್ರಶ್ನೆಗಳನ್ನು  ಕೇಳಿದ್ದಾರೆ.

ಇದಕ್ಕೆ ಉತ್ತರ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಅಶ್ವಿನಿ ಕುಮಾರ್, ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬ ವರದಿಗಳು ಇವೆ. ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದೂ ಹೇಳಲಾಗಿದೆ.  ಕಾರ್ಸಿನೋಜೆನಿಕ್ ಆಗಿರುವುದರ ಬಗ್ಗೆಯೂ ವರದಿ ಇದೆ. ಹೀಗಾಗಿ ಬಾಯಿ, ಗಂಟಲು, ಅನ್ನನಾಳ, ಜಠರದ ಮೇಲೆ ಪರಿಣಾಮ ಇದೆ. ಅಡಿಕೆ ಉತ್ಪನ್ನಗಳು ಮತ್ತು ಜಗಿಯುವ ತಂಬಾಕಿಗೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ವಿಧಿಸಿರುವ ನಿಬಂಧನೆಗಳ ಕುರಿತು ಸಚಿವರು ಉತ್ತರಿಸಿದರು. ಸುಪಾರಿ ಮತ್ತು ಪಾನ್ ಮಸಾಲವನ್ನು ಆಹಾರ ಸುರಕ್ಷತೆ ಮತ್ತು ಮಾನದಂಡಗಳ ನಿಯಮಗಳು 2011 ರ ಅಡಿಯಲ್ಲಿ ಇರುತ್ತದೆ. ಯಾವುದೇ ಆಹಾರ ಉತ್ಪನ್ನದಲ್ಲಿ ತಂಬಾಕು ಮತ್ತು ನಿಕೋಟಿನ್  ಹಾಗೂ ಅಡಿಕೆಯನ್ನು  ಬಳಸುವುದನ್ನು ನಿಷೇಧಿಸಲಾಗಿದೆ ಎಂದು ವಿವರ ನೀಡಿದ್ದಾರೆ.

2017 ರಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವರಾಗಿದ್ದ ಅನುಪ್ರಿಯಾ ಪಟೇಲ್  ಡಿಸೆಂಬರ್ 22, 2017 ರಂದು ಲೋಕಸಭೆಗೆ  ಇದೇ ಮಾಹಿತಿ ನೀಡಿದ್ದರು ಆಗಲೂ ತೀವ್ರ ಚರ್ಚೆಯಾಗಿತ್ತು. ಅನೇಕ ವರ್ಷಗಳಿಂದ ಅಡಿಕೆ ಬೆಳೆಗಾರರಿಗೆ ಇದೊಂದು ಸಂಕಷ್ಟ ಇದೆ. ಅಡಿಕೆ ಆಹಾರ ಪದಾರ್ಥಗಳಲ್ಲಿ  ಬಳಕೆ ಮಾಡಲಾಗುತ್ತದೆ. ಅಡಿಕೆ ಚಾಕೋಲೇಟ್, ಅಡಿಕೆ ಪೇಯ, ಐಸ್ ಕ್ರೀಂ ಇತ್ಯಾದಿಗಳಲ್ಲೂ ಬಳಕೆ ಮಾಡಬಹುದಾಗಿದೆ. ಅದೂ ಅಲ್ಲದೆ ಕಳೆದ ನೂರಾರು ವರ್ಷಗಳಿಂದ ಅಡಿಕೆ ಜಗಿಯುವ ಮಂದಿ ಇದ್ದಾರೆ. ಅಡಿಕೆಯನ್ನು ಪುರಾಣ ಕಾಲದಿಂದಲೂ ಪೂಕಾ ಕಾರ್ಯದಲ್ಲಿ ಬಳಕೆ ಮಾಡುತ್ತಾರೆ. ಹೀಗಿರುವಾಗ ಇದೊಂದು ಸಂಕಷ್ಟಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಾದ್ಯವಾಗಿಲ್ಲ. ಜನಪ್ರತಿನಿಧಿಗಳು ಈ ಬಗ್ಗೆ ಆಸಕ್ತಿ ತೋರಿದಂತೆ ಕಾಣುತ್ತಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

2 minutes ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

6 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

6 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

14 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

14 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago