Advertisement
MIRROR FOCUS

ಅಡಿಕೆ ಆಮದು ನಿಲ್ಲುವತ್ತ ಕ್ರಮ ? ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ …

Share

ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮವಾಗಿ ಆಮದಾಗುತ್ತಿದೆ. ಇದು ಸಂಪೂರ್ಣ ನಿಷೇಧವಾದರೆ ಅಡಿಕೆ ಧಾರಣೆ ಸ್ಥಿರ ಹಾಗೂ ಏರಿಕೆಯೂ ಸಾಧ್ಯವಿದೆ. ಇದೀಗ ಕೇಂದ್ರ ಸರಕಾರವು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳುತ್ತಿದೆ. ಇದೊಂದು ಕಾರಣದಿಂದ ಅಡಿಕೆ ಧಾರಣೆ ಏರಿಕೆ ನಿರೀಕ್ಷೆಯೂ ಇದ್ದು ಕಳೆದ ವಾರವೇ ಹೊಸ ಅಡಿಕೆಗೆ 2 ರೂಪಾಯಿ ಧಾರಣೆಯೂ ಏರಿಕೆ ಕಂಡಿದೆ.

ವಿದೇಶದಿಂದ ಕಳಪೆ ಅಡಿಕೆ  ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ. ಇದರ ಜೊತೆಗೆ ಅಡಿಕೆ ಬೆಳೆಗಾರರ ಬಗ್ಗೆ ಹಾಗೂ ಅಡಿಕೆ ಕೃಷಿ ಬಗ್ಗೆ ಸಮಗ್ರ ವಿವರವನ್ನೂ ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ಹಾಗೂ ಅಡಿಕೆ ಬೆಳೆಗಾರರ ನಿಯೋಗ ನೀಡಿದೆ. ಅಧಿವೇಶನದ ಬಳಿಕ ಕ್ರಮವಾಗಲಿದೆ ಎಂದು  ಮಾಹಿತಿ ಲಭ್ಯವಾಗಿದೆ.

ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆ ದೇಶದೊಳಗೆ ಬಂದು ಇಲ್ಲಿ ಭಾರತದ ಅಡಿಕೆ ಜೊತೆ ಬೆರೆಸಿ ಮಾರಾಟ ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಇದೀಗ ಕಳೆದ ಕೆಲವು ಸಮಯಗಳಿಂದ ನಿಗಾ ಇರಿಸಲಾಗಿದ್ದು ಸಮಗ್ರ ಮಾಹಿತಿಯನ್ನೂ ಕೇಂದ್ರ ಸರಕಾರಕ್ಕೆ ನೀಡಲಾಗಿದೆ. ಕಳಪೆ ಗುಣಮಟ್ಟದ ಅಡಿಕೆಯ ಕಾರಣದಿಂದ ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು  ಸಂಕಷ್ಟಕ್ಕೆ ಒಳಗಾಗಿವೆ . ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಈ ಬಾರಿ ಕೊಳೆರೋಗದಿಂದ ಅಡಿಕೆಯೂ ಕಡಿಮೆಯಾಗಿರುವ ಕಾರಣ ಧಾರಣೆ ಏರಿಕೆ ಈಗಲೇ ಕಾಣಬೇಕಿತ್ತು. ಆದರೆ ಏರಿಕೆಯಾಗದೆ ಕೃಷಿಕರೂ ಕಂಗಾಲಾಗಿದ್ದಾರೆ. ಇದೀಗ ಸರಕಾರವು ಸೂಕ್ತ ಕ್ರಮಕೈಗೊಂಡರೆ ಅಡಿಕೆ ಧಾರಣೆ ಏರಿಕೆ ನಿಶ್ಚಿತ.

ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧಿವೇಶನದಲ್ಲಿ  ಅಡಿಕೆ ಬೆಳೆಗಾರರ ಪರವಾಗಿ ಧ್ವನಿ ಎತ್ತು   ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಒತ್ತಾಯಿಸಿರುವುದು  ಕೃಷಿಕರಿಗೆ ಆಶಾಭಾವನೆ ಮೂಡಿಸಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

16 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

18 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

21 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago