Advertisement
MIRROR FOCUS

ಅಡಿಕೆ ಆಮದು ನಿಲ್ಲುವತ್ತ ಕ್ರಮ ? ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ …

Share

ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮವಾಗಿ ಆಮದಾಗುತ್ತಿದೆ. ಇದು ಸಂಪೂರ್ಣ ನಿಷೇಧವಾದರೆ ಅಡಿಕೆ ಧಾರಣೆ ಸ್ಥಿರ ಹಾಗೂ ಏರಿಕೆಯೂ ಸಾಧ್ಯವಿದೆ. ಇದೀಗ ಕೇಂದ್ರ ಸರಕಾರವು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳುತ್ತಿದೆ. ಇದೊಂದು ಕಾರಣದಿಂದ ಅಡಿಕೆ ಧಾರಣೆ ಏರಿಕೆ ನಿರೀಕ್ಷೆಯೂ ಇದ್ದು ಕಳೆದ ವಾರವೇ ಹೊಸ ಅಡಿಕೆಗೆ 2 ರೂಪಾಯಿ ಧಾರಣೆಯೂ ಏರಿಕೆ ಕಂಡಿದೆ.

ವಿದೇಶದಿಂದ ಕಳಪೆ ಅಡಿಕೆ  ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ. ಇದರ ಜೊತೆಗೆ ಅಡಿಕೆ ಬೆಳೆಗಾರರ ಬಗ್ಗೆ ಹಾಗೂ ಅಡಿಕೆ ಕೃಷಿ ಬಗ್ಗೆ ಸಮಗ್ರ ವಿವರವನ್ನೂ ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ಹಾಗೂ ಅಡಿಕೆ ಬೆಳೆಗಾರರ ನಿಯೋಗ ನೀಡಿದೆ. ಅಧಿವೇಶನದ ಬಳಿಕ ಕ್ರಮವಾಗಲಿದೆ ಎಂದು  ಮಾಹಿತಿ ಲಭ್ಯವಾಗಿದೆ.

Advertisement

ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆ ದೇಶದೊಳಗೆ ಬಂದು ಇಲ್ಲಿ ಭಾರತದ ಅಡಿಕೆ ಜೊತೆ ಬೆರೆಸಿ ಮಾರಾಟ ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಇದೀಗ ಕಳೆದ ಕೆಲವು ಸಮಯಗಳಿಂದ ನಿಗಾ ಇರಿಸಲಾಗಿದ್ದು ಸಮಗ್ರ ಮಾಹಿತಿಯನ್ನೂ ಕೇಂದ್ರ ಸರಕಾರಕ್ಕೆ ನೀಡಲಾಗಿದೆ. ಕಳಪೆ ಗುಣಮಟ್ಟದ ಅಡಿಕೆಯ ಕಾರಣದಿಂದ ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು  ಸಂಕಷ್ಟಕ್ಕೆ ಒಳಗಾಗಿವೆ . ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಈ ಬಾರಿ ಕೊಳೆರೋಗದಿಂದ ಅಡಿಕೆಯೂ ಕಡಿಮೆಯಾಗಿರುವ ಕಾರಣ ಧಾರಣೆ ಏರಿಕೆ ಈಗಲೇ ಕಾಣಬೇಕಿತ್ತು. ಆದರೆ ಏರಿಕೆಯಾಗದೆ ಕೃಷಿಕರೂ ಕಂಗಾಲಾಗಿದ್ದಾರೆ. ಇದೀಗ ಸರಕಾರವು ಸೂಕ್ತ ಕ್ರಮಕೈಗೊಂಡರೆ ಅಡಿಕೆ ಧಾರಣೆ ಏರಿಕೆ ನಿಶ್ಚಿತ.

ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧಿವೇಶನದಲ್ಲಿ  ಅಡಿಕೆ ಬೆಳೆಗಾರರ ಪರವಾಗಿ ಧ್ವನಿ ಎತ್ತು   ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಒತ್ತಾಯಿಸಿರುವುದು  ಕೃಷಿಕರಿಗೆ ಆಶಾಭಾವನೆ ಮೂಡಿಸಿದೆ.

Advertisement

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

4 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago