Advertisement
MIRROR FOCUS

ಅಡಿಕೆ ಆಮದು ನಿಲ್ಲುವತ್ತ ಕ್ರಮ ? ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ …

Share

ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮವಾಗಿ ಆಮದಾಗುತ್ತಿದೆ. ಇದು ಸಂಪೂರ್ಣ ನಿಷೇಧವಾದರೆ ಅಡಿಕೆ ಧಾರಣೆ ಸ್ಥಿರ ಹಾಗೂ ಏರಿಕೆಯೂ ಸಾಧ್ಯವಿದೆ. ಇದೀಗ ಕೇಂದ್ರ ಸರಕಾರವು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳುತ್ತಿದೆ. ಇದೊಂದು ಕಾರಣದಿಂದ ಅಡಿಕೆ ಧಾರಣೆ ಏರಿಕೆ ನಿರೀಕ್ಷೆಯೂ ಇದ್ದು ಕಳೆದ ವಾರವೇ ಹೊಸ ಅಡಿಕೆಗೆ 2 ರೂಪಾಯಿ ಧಾರಣೆಯೂ ಏರಿಕೆ ಕಂಡಿದೆ.

ವಿದೇಶದಿಂದ ಕಳಪೆ ಅಡಿಕೆ  ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ. ಇದರ ಜೊತೆಗೆ ಅಡಿಕೆ ಬೆಳೆಗಾರರ ಬಗ್ಗೆ ಹಾಗೂ ಅಡಿಕೆ ಕೃಷಿ ಬಗ್ಗೆ ಸಮಗ್ರ ವಿವರವನ್ನೂ ವಾಣಿಜ್ಯ ಸಚಿವರಿಗೆ ಕ್ಯಾಂಪ್ಕೋ ಹಾಗೂ ಅಡಿಕೆ ಬೆಳೆಗಾರರ ನಿಯೋಗ ನೀಡಿದೆ. ಅಧಿವೇಶನದ ಬಳಿಕ ಕ್ರಮವಾಗಲಿದೆ ಎಂದು  ಮಾಹಿತಿ ಲಭ್ಯವಾಗಿದೆ.

ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆ ದೇಶದೊಳಗೆ ಬಂದು ಇಲ್ಲಿ ಭಾರತದ ಅಡಿಕೆ ಜೊತೆ ಬೆರೆಸಿ ಮಾರಾಟ ಮಾಡುವ ಪ್ರಕ್ರಿಯೆ ನಡೆಯುತ್ತಿತ್ತು. ಇದೀಗ ಕಳೆದ ಕೆಲವು ಸಮಯಗಳಿಂದ ನಿಗಾ ಇರಿಸಲಾಗಿದ್ದು ಸಮಗ್ರ ಮಾಹಿತಿಯನ್ನೂ ಕೇಂದ್ರ ಸರಕಾರಕ್ಕೆ ನೀಡಲಾಗಿದೆ. ಕಳಪೆ ಗುಣಮಟ್ಟದ ಅಡಿಕೆಯ ಕಾರಣದಿಂದ ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು  ಸಂಕಷ್ಟಕ್ಕೆ ಒಳಗಾಗಿವೆ . ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಈ ಬಾರಿ ಕೊಳೆರೋಗದಿಂದ ಅಡಿಕೆಯೂ ಕಡಿಮೆಯಾಗಿರುವ ಕಾರಣ ಧಾರಣೆ ಏರಿಕೆ ಈಗಲೇ ಕಾಣಬೇಕಿತ್ತು. ಆದರೆ ಏರಿಕೆಯಾಗದೆ ಕೃಷಿಕರೂ ಕಂಗಾಲಾಗಿದ್ದಾರೆ. ಇದೀಗ ಸರಕಾರವು ಸೂಕ್ತ ಕ್ರಮಕೈಗೊಂಡರೆ ಅಡಿಕೆ ಧಾರಣೆ ಏರಿಕೆ ನಿಶ್ಚಿತ.

ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಧಿವೇಶನದಲ್ಲಿ  ಅಡಿಕೆ ಬೆಳೆಗಾರರ ಪರವಾಗಿ ಧ್ವನಿ ಎತ್ತು   ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಒತ್ತಾಯಿಸಿರುವುದು  ಕೃಷಿಕರಿಗೆ ಆಶಾಭಾವನೆ ಮೂಡಿಸಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago