Advertisement
ವಿಶೇಷ ವರದಿಗಳು

ಅಡಿಕೆ ಉಳಿಸಲು ಯತ್ನಿಸುತ್ತಿವೆ ಸಹಕಾರಿ ಸಂಘಗಳು…..

Share

ಸುಳ್ಯ: ಅಡಿಕೆ ಉಳಿಸಲು ಸಹಕಾರಿ ಸಂಘಗಳು ಈಗ ಪ್ರಯತ್ನ ಮಾಡುತ್ತಿವೆ. ಈಗ ಸಹಕಾರಿ ಸಂಘಗಳ ಪಾತ್ರವೂ ದೊಡ್ಡದಿದೆ. ಅದೇನು ?.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ಉಳಿದಿರುವುದು  ಹಾಗೂ ಬೆಳೆಯುತ್ತಿರುವುದು  ಅಡಿಕೆ ಬೆಳೆಗಾರರಿಂದ. ಅಡಿಕೆ ಕೃಷಿಕರಿಂದ. ಕೃಷಿಕರು  ಸಾಲ ಪಡೆಯುವುದು  ಹಾಗೂ ಸಾಲ ಮರುಪಾವತಿ ಮಾಡುವುದು  ಅಡಿಕೆಯನ್ನು  ನಂಬಿಯೇ. ಹಾಗಾಗಿ ಇಂದು ಅಡಿಕೆ ಉಳಿದರೆ ಮಾತ್ರವೇ ಸಹಕಾರಿ ಸಂಘಗಳು ಉಳಿದೀತು. ಸಹಕಾರಿ ಸಂಘಗಳು ಬೆಳೆದರೆ ಮಾತ್ರವೇ ಜಿಲ್ಲೆಯ ಆರ್ಥಿಕ ಶಕ್ತಿ ಹೆಚ್ಚೀತು. ಇದಕ್ಕಾಗಿಯೇ ಇಂದು ಸಹಕಾರಿ ಸಂಘಗಳು ಅಡಿಕೆ ಬೆಳೆಗಾರರ ಪ್ರಮುಖ ಸಮಸ್ಯೆಯಾದ ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಮಾಡಲು ಸ್ವ ಉದ್ಯೋಗ, ಕೌಶಲ ಪಡೆಯತ್ತ ಮನಸ್ಸು ಮಾಡಿದೆ. ಅದರ ಮೊದಲ ಭಾಗ ಆರಂಭವಾಗಿದೆ. ಸುಳ್ಯ ತಾಲೂಕಿನ ಪಂಜದಲ್ಲಿ 3 ಸಹಕಾರಿ ಸಂಘಗಳು ಜೊತೆಯಾಗಿ ಅಡಿಕೆ ಮರ ಏರುವ ತರಬೇತಿ ಶಿಬಿರ ಆಯೋಜನೆ ಮಾಡಿದ್ದಾರೆ. 5 ದಿನಗಳ ಶಿಬಿರ ನಡೆದು ಶುಕ್ರವಾರ ಸಮಾರೋಪಗೊಳ್ಳುತ್ತಿದೆ. ಮುಂದೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೂ ಇದು ಪ್ರೇರಣೆಯಾಗಬೇಕು, ಮಾದರಿಯಾಗಬೇಕು. ಪ್ರತೀ ಗ್ರಾಮಗಳಲ್ಲಿ ಇಂತಹ ಶಿಬಿರಗಳು ನಡೆದರೆ ಮಾತ್ರವೇ ಅಡಿಕೆ ಬೆಳೆಗಾರರಿಗೆ, ಸಹಕಾರಿ ಸಂಘಗಳಿಗೆ ಉಸಿರು ತುಂಬಲು ಸಾಧ್ಯ.

 

( ತರಬೇತಿಯಲ್ಲಿ ಇರುವ ಶಿಬಿರಾರ್ಥಿಗಳು )

 

 

(ಸೆಂಟರ್ ಪ್ಯಾಡ್ ತಯಾರಿ ಹೀಗೆ )

 

ಪಂಜದಲ್ಲಿ  ನಡೆದ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆದಿದೆ. 32 ಮಂದಿ ತರಬೇತಿ ಪಡೆದಿದ್ದಾರೆ. ತರಬೇತು ಪಡೆದ ಅಟೋ ಚಾಲಕ ಜಯರಾಮ ಅವರು ಹೇಳುವಂತೆ, “ಮುಂದೆ ಭವಿಷ್ಯ ಇರುವುದು  ಇಂತಹ ಉದ್ಯೋಗದಲ್ಲಿ. ಅಟೋ ಓಡಿಸಲು ಪೈಪೋಟಿ ಇದೆ. ಹೀಗಾಗಿ ದಿನಕ್ಕೆ ಕನಿಷ್ಠ ಆದಾಯ ಬರುವ ದಿನ ಇದೆ. ಆದರೆ ಅಡಿಕೆ ಮರ ಏರುವುದಕ್ಕೆ ತರಬೇತು ಪಡೆದ ಬಳಿಕ ಧೈರ್ಯ ಬಂದಿದೆ. ಈ ಉದ್ಯೋಗಕ್ಕೂ ಗೌರವ ಇದೆ” ಎಂದು ಹೇಳುತ್ತಾರೆ.

“ಸಹಕಾರಿ ಸಂಘಗಳು ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ ಬಾರದೇ ಇದ್ದರೆ ಸಹಕಾರಿ ಸಂಘಗಳಿಗೂ ಆರ್ಥಿಕ ವ್ಯವಹಾರ ನಿರ್ವಹಣೆ ಮಾಡಲು ಕಷ್ಟವಿದೆ. ಹೀಗಾಗಿ ಇದು ಸೂಕ್ತ ಸಮಯವಾಗಿದ್ದು ತರಬೇತಿ ನೀಡುವ ಮೂಲಕ ಕನಿಷ್ಠ ಅವರ ಮನೆಯಲ್ಲಾದರೂ ಅಡಿಕೆ ಕೊಯಿಲು, ಔಷಧಿ ಸಿಂಪಡಣೆ ಮಾಡಬಹುದಾಗಿದೆ” ಎಂದು ಹೇಳುತ್ತಾರೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

2 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

9 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

9 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

9 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

18 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

18 hours ago