Advertisement
ವಿಶೇಷ ವರದಿಗಳು

ಅಡಿಕೆ ಉಳಿಸಲು ಯತ್ನಿಸುತ್ತಿವೆ ಸಹಕಾರಿ ಸಂಘಗಳು…..

Share

ಸುಳ್ಯ: ಅಡಿಕೆ ಉಳಿಸಲು ಸಹಕಾರಿ ಸಂಘಗಳು ಈಗ ಪ್ರಯತ್ನ ಮಾಡುತ್ತಿವೆ. ಈಗ ಸಹಕಾರಿ ಸಂಘಗಳ ಪಾತ್ರವೂ ದೊಡ್ಡದಿದೆ. ಅದೇನು ?.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ಉಳಿದಿರುವುದು  ಹಾಗೂ ಬೆಳೆಯುತ್ತಿರುವುದು  ಅಡಿಕೆ ಬೆಳೆಗಾರರಿಂದ. ಅಡಿಕೆ ಕೃಷಿಕರಿಂದ. ಕೃಷಿಕರು  ಸಾಲ ಪಡೆಯುವುದು  ಹಾಗೂ ಸಾಲ ಮರುಪಾವತಿ ಮಾಡುವುದು  ಅಡಿಕೆಯನ್ನು  ನಂಬಿಯೇ. ಹಾಗಾಗಿ ಇಂದು ಅಡಿಕೆ ಉಳಿದರೆ ಮಾತ್ರವೇ ಸಹಕಾರಿ ಸಂಘಗಳು ಉಳಿದೀತು. ಸಹಕಾರಿ ಸಂಘಗಳು ಬೆಳೆದರೆ ಮಾತ್ರವೇ ಜಿಲ್ಲೆಯ ಆರ್ಥಿಕ ಶಕ್ತಿ ಹೆಚ್ಚೀತು. ಇದಕ್ಕಾಗಿಯೇ ಇಂದು ಸಹಕಾರಿ ಸಂಘಗಳು ಅಡಿಕೆ ಬೆಳೆಗಾರರ ಪ್ರಮುಖ ಸಮಸ್ಯೆಯಾದ ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಮಾಡಲು ಸ್ವ ಉದ್ಯೋಗ, ಕೌಶಲ ಪಡೆಯತ್ತ ಮನಸ್ಸು ಮಾಡಿದೆ. ಅದರ ಮೊದಲ ಭಾಗ ಆರಂಭವಾಗಿದೆ. ಸುಳ್ಯ ತಾಲೂಕಿನ ಪಂಜದಲ್ಲಿ 3 ಸಹಕಾರಿ ಸಂಘಗಳು ಜೊತೆಯಾಗಿ ಅಡಿಕೆ ಮರ ಏರುವ ತರಬೇತಿ ಶಿಬಿರ ಆಯೋಜನೆ ಮಾಡಿದ್ದಾರೆ. 5 ದಿನಗಳ ಶಿಬಿರ ನಡೆದು ಶುಕ್ರವಾರ ಸಮಾರೋಪಗೊಳ್ಳುತ್ತಿದೆ. ಮುಂದೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೂ ಇದು ಪ್ರೇರಣೆಯಾಗಬೇಕು, ಮಾದರಿಯಾಗಬೇಕು. ಪ್ರತೀ ಗ್ರಾಮಗಳಲ್ಲಿ ಇಂತಹ ಶಿಬಿರಗಳು ನಡೆದರೆ ಮಾತ್ರವೇ ಅಡಿಕೆ ಬೆಳೆಗಾರರಿಗೆ, ಸಹಕಾರಿ ಸಂಘಗಳಿಗೆ ಉಸಿರು ತುಂಬಲು ಸಾಧ್ಯ.

 

( ತರಬೇತಿಯಲ್ಲಿ ಇರುವ ಶಿಬಿರಾರ್ಥಿಗಳು )

 

 

(ಸೆಂಟರ್ ಪ್ಯಾಡ್ ತಯಾರಿ ಹೀಗೆ )

 

ಪಂಜದಲ್ಲಿ  ನಡೆದ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆದಿದೆ. 32 ಮಂದಿ ತರಬೇತಿ ಪಡೆದಿದ್ದಾರೆ. ತರಬೇತು ಪಡೆದ ಅಟೋ ಚಾಲಕ ಜಯರಾಮ ಅವರು ಹೇಳುವಂತೆ, “ಮುಂದೆ ಭವಿಷ್ಯ ಇರುವುದು  ಇಂತಹ ಉದ್ಯೋಗದಲ್ಲಿ. ಅಟೋ ಓಡಿಸಲು ಪೈಪೋಟಿ ಇದೆ. ಹೀಗಾಗಿ ದಿನಕ್ಕೆ ಕನಿಷ್ಠ ಆದಾಯ ಬರುವ ದಿನ ಇದೆ. ಆದರೆ ಅಡಿಕೆ ಮರ ಏರುವುದಕ್ಕೆ ತರಬೇತು ಪಡೆದ ಬಳಿಕ ಧೈರ್ಯ ಬಂದಿದೆ. ಈ ಉದ್ಯೋಗಕ್ಕೂ ಗೌರವ ಇದೆ” ಎಂದು ಹೇಳುತ್ತಾರೆ.

“ಸಹಕಾರಿ ಸಂಘಗಳು ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ ಬಾರದೇ ಇದ್ದರೆ ಸಹಕಾರಿ ಸಂಘಗಳಿಗೂ ಆರ್ಥಿಕ ವ್ಯವಹಾರ ನಿರ್ವಹಣೆ ಮಾಡಲು ಕಷ್ಟವಿದೆ. ಹೀಗಾಗಿ ಇದು ಸೂಕ್ತ ಸಮಯವಾಗಿದ್ದು ತರಬೇತಿ ನೀಡುವ ಮೂಲಕ ಕನಿಷ್ಠ ಅವರ ಮನೆಯಲ್ಲಾದರೂ ಅಡಿಕೆ ಕೊಯಿಲು, ಔಷಧಿ ಸಿಂಪಡಣೆ ಮಾಡಬಹುದಾಗಿದೆ” ಎಂದು ಹೇಳುತ್ತಾರೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

2 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

2 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

15 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

21 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago