Advertisement
ವಿಶೇಷ ವರದಿಗಳು

ಅಡಿಕೆ ಉಳಿಸಲು ಯತ್ನಿಸುತ್ತಿವೆ ಸಹಕಾರಿ ಸಂಘಗಳು…..

Share

ಸುಳ್ಯ: ಅಡಿಕೆ ಉಳಿಸಲು ಸಹಕಾರಿ ಸಂಘಗಳು ಈಗ ಪ್ರಯತ್ನ ಮಾಡುತ್ತಿವೆ. ಈಗ ಸಹಕಾರಿ ಸಂಘಗಳ ಪಾತ್ರವೂ ದೊಡ್ಡದಿದೆ. ಅದೇನು ?.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ಉಳಿದಿರುವುದು  ಹಾಗೂ ಬೆಳೆಯುತ್ತಿರುವುದು  ಅಡಿಕೆ ಬೆಳೆಗಾರರಿಂದ. ಅಡಿಕೆ ಕೃಷಿಕರಿಂದ. ಕೃಷಿಕರು  ಸಾಲ ಪಡೆಯುವುದು  ಹಾಗೂ ಸಾಲ ಮರುಪಾವತಿ ಮಾಡುವುದು  ಅಡಿಕೆಯನ್ನು  ನಂಬಿಯೇ. ಹಾಗಾಗಿ ಇಂದು ಅಡಿಕೆ ಉಳಿದರೆ ಮಾತ್ರವೇ ಸಹಕಾರಿ ಸಂಘಗಳು ಉಳಿದೀತು. ಸಹಕಾರಿ ಸಂಘಗಳು ಬೆಳೆದರೆ ಮಾತ್ರವೇ ಜಿಲ್ಲೆಯ ಆರ್ಥಿಕ ಶಕ್ತಿ ಹೆಚ್ಚೀತು. ಇದಕ್ಕಾಗಿಯೇ ಇಂದು ಸಹಕಾರಿ ಸಂಘಗಳು ಅಡಿಕೆ ಬೆಳೆಗಾರರ ಪ್ರಮುಖ ಸಮಸ್ಯೆಯಾದ ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಮಾಡಲು ಸ್ವ ಉದ್ಯೋಗ, ಕೌಶಲ ಪಡೆಯತ್ತ ಮನಸ್ಸು ಮಾಡಿದೆ. ಅದರ ಮೊದಲ ಭಾಗ ಆರಂಭವಾಗಿದೆ. ಸುಳ್ಯ ತಾಲೂಕಿನ ಪಂಜದಲ್ಲಿ 3 ಸಹಕಾರಿ ಸಂಘಗಳು ಜೊತೆಯಾಗಿ ಅಡಿಕೆ ಮರ ಏರುವ ತರಬೇತಿ ಶಿಬಿರ ಆಯೋಜನೆ ಮಾಡಿದ್ದಾರೆ. 5 ದಿನಗಳ ಶಿಬಿರ ನಡೆದು ಶುಕ್ರವಾರ ಸಮಾರೋಪಗೊಳ್ಳುತ್ತಿದೆ. ಮುಂದೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೂ ಇದು ಪ್ರೇರಣೆಯಾಗಬೇಕು, ಮಾದರಿಯಾಗಬೇಕು. ಪ್ರತೀ ಗ್ರಾಮಗಳಲ್ಲಿ ಇಂತಹ ಶಿಬಿರಗಳು ನಡೆದರೆ ಮಾತ್ರವೇ ಅಡಿಕೆ ಬೆಳೆಗಾರರಿಗೆ, ಸಹಕಾರಿ ಸಂಘಗಳಿಗೆ ಉಸಿರು ತುಂಬಲು ಸಾಧ್ಯ.

 

( ತರಬೇತಿಯಲ್ಲಿ ಇರುವ ಶಿಬಿರಾರ್ಥಿಗಳು )

 

 

(ಸೆಂಟರ್ ಪ್ಯಾಡ್ ತಯಾರಿ ಹೀಗೆ )

 

ಪಂಜದಲ್ಲಿ  ನಡೆದ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆದಿದೆ. 32 ಮಂದಿ ತರಬೇತಿ ಪಡೆದಿದ್ದಾರೆ. ತರಬೇತು ಪಡೆದ ಅಟೋ ಚಾಲಕ ಜಯರಾಮ ಅವರು ಹೇಳುವಂತೆ, “ಮುಂದೆ ಭವಿಷ್ಯ ಇರುವುದು  ಇಂತಹ ಉದ್ಯೋಗದಲ್ಲಿ. ಅಟೋ ಓಡಿಸಲು ಪೈಪೋಟಿ ಇದೆ. ಹೀಗಾಗಿ ದಿನಕ್ಕೆ ಕನಿಷ್ಠ ಆದಾಯ ಬರುವ ದಿನ ಇದೆ. ಆದರೆ ಅಡಿಕೆ ಮರ ಏರುವುದಕ್ಕೆ ತರಬೇತು ಪಡೆದ ಬಳಿಕ ಧೈರ್ಯ ಬಂದಿದೆ. ಈ ಉದ್ಯೋಗಕ್ಕೂ ಗೌರವ ಇದೆ” ಎಂದು ಹೇಳುತ್ತಾರೆ.

“ಸಹಕಾರಿ ಸಂಘಗಳು ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ ಬಾರದೇ ಇದ್ದರೆ ಸಹಕಾರಿ ಸಂಘಗಳಿಗೂ ಆರ್ಥಿಕ ವ್ಯವಹಾರ ನಿರ್ವಹಣೆ ಮಾಡಲು ಕಷ್ಟವಿದೆ. ಹೀಗಾಗಿ ಇದು ಸೂಕ್ತ ಸಮಯವಾಗಿದ್ದು ತರಬೇತಿ ನೀಡುವ ಮೂಲಕ ಕನಿಷ್ಠ ಅವರ ಮನೆಯಲ್ಲಾದರೂ ಅಡಿಕೆ ಕೊಯಿಲು, ಔಷಧಿ ಸಿಂಪಡಣೆ ಮಾಡಬಹುದಾಗಿದೆ” ಎಂದು ಹೇಳುತ್ತಾರೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

9 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

17 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago