Advertisement
ವಿಶೇಷ ವರದಿಗಳು

ಅಡಿಕೆ ಉಳಿಸಲು ಯತ್ನಿಸುತ್ತಿವೆ ಸಹಕಾರಿ ಸಂಘಗಳು…..

Share

ಸುಳ್ಯ: ಅಡಿಕೆ ಉಳಿಸಲು ಸಹಕಾರಿ ಸಂಘಗಳು ಈಗ ಪ್ರಯತ್ನ ಮಾಡುತ್ತಿವೆ. ಈಗ ಸಹಕಾರಿ ಸಂಘಗಳ ಪಾತ್ರವೂ ದೊಡ್ಡದಿದೆ. ಅದೇನು ?.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳು ಉಳಿದಿರುವುದು  ಹಾಗೂ ಬೆಳೆಯುತ್ತಿರುವುದು  ಅಡಿಕೆ ಬೆಳೆಗಾರರಿಂದ. ಅಡಿಕೆ ಕೃಷಿಕರಿಂದ. ಕೃಷಿಕರು  ಸಾಲ ಪಡೆಯುವುದು  ಹಾಗೂ ಸಾಲ ಮರುಪಾವತಿ ಮಾಡುವುದು  ಅಡಿಕೆಯನ್ನು  ನಂಬಿಯೇ. ಹಾಗಾಗಿ ಇಂದು ಅಡಿಕೆ ಉಳಿದರೆ ಮಾತ್ರವೇ ಸಹಕಾರಿ ಸಂಘಗಳು ಉಳಿದೀತು. ಸಹಕಾರಿ ಸಂಘಗಳು ಬೆಳೆದರೆ ಮಾತ್ರವೇ ಜಿಲ್ಲೆಯ ಆರ್ಥಿಕ ಶಕ್ತಿ ಹೆಚ್ಚೀತು. ಇದಕ್ಕಾಗಿಯೇ ಇಂದು ಸಹಕಾರಿ ಸಂಘಗಳು ಅಡಿಕೆ ಬೆಳೆಗಾರರ ಪ್ರಮುಖ ಸಮಸ್ಯೆಯಾದ ಔಷಧಿ ಸಿಂಪಡಣೆ, ಅಡಿಕೆ ಕೊಯ್ಲು ಮಾಡಲು ಸ್ವ ಉದ್ಯೋಗ, ಕೌಶಲ ಪಡೆಯತ್ತ ಮನಸ್ಸು ಮಾಡಿದೆ. ಅದರ ಮೊದಲ ಭಾಗ ಆರಂಭವಾಗಿದೆ. ಸುಳ್ಯ ತಾಲೂಕಿನ ಪಂಜದಲ್ಲಿ 3 ಸಹಕಾರಿ ಸಂಘಗಳು ಜೊತೆಯಾಗಿ ಅಡಿಕೆ ಮರ ಏರುವ ತರಬೇತಿ ಶಿಬಿರ ಆಯೋಜನೆ ಮಾಡಿದ್ದಾರೆ. 5 ದಿನಗಳ ಶಿಬಿರ ನಡೆದು ಶುಕ್ರವಾರ ಸಮಾರೋಪಗೊಳ್ಳುತ್ತಿದೆ. ಮುಂದೆ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳಿಗೂ ಇದು ಪ್ರೇರಣೆಯಾಗಬೇಕು, ಮಾದರಿಯಾಗಬೇಕು. ಪ್ರತೀ ಗ್ರಾಮಗಳಲ್ಲಿ ಇಂತಹ ಶಿಬಿರಗಳು ನಡೆದರೆ ಮಾತ್ರವೇ ಅಡಿಕೆ ಬೆಳೆಗಾರರಿಗೆ, ಸಹಕಾರಿ ಸಂಘಗಳಿಗೆ ಉಸಿರು ತುಂಬಲು ಸಾಧ್ಯ.

 

( ತರಬೇತಿಯಲ್ಲಿ ಇರುವ ಶಿಬಿರಾರ್ಥಿಗಳು )

 

 

(ಸೆಂಟರ್ ಪ್ಯಾಡ್ ತಯಾರಿ ಹೀಗೆ )

 

ಪಂಜದಲ್ಲಿ  ನಡೆದ ಶಿಬಿರವು ಅತ್ಯಂತ ಯಶಸ್ವಿಯಾಗಿ ನಡೆದಿದೆ. 32 ಮಂದಿ ತರಬೇತಿ ಪಡೆದಿದ್ದಾರೆ. ತರಬೇತು ಪಡೆದ ಅಟೋ ಚಾಲಕ ಜಯರಾಮ ಅವರು ಹೇಳುವಂತೆ, “ಮುಂದೆ ಭವಿಷ್ಯ ಇರುವುದು  ಇಂತಹ ಉದ್ಯೋಗದಲ್ಲಿ. ಅಟೋ ಓಡಿಸಲು ಪೈಪೋಟಿ ಇದೆ. ಹೀಗಾಗಿ ದಿನಕ್ಕೆ ಕನಿಷ್ಠ ಆದಾಯ ಬರುವ ದಿನ ಇದೆ. ಆದರೆ ಅಡಿಕೆ ಮರ ಏರುವುದಕ್ಕೆ ತರಬೇತು ಪಡೆದ ಬಳಿಕ ಧೈರ್ಯ ಬಂದಿದೆ. ಈ ಉದ್ಯೋಗಕ್ಕೂ ಗೌರವ ಇದೆ” ಎಂದು ಹೇಳುತ್ತಾರೆ.

“ಸಹಕಾರಿ ಸಂಘಗಳು ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ ಬಾರದೇ ಇದ್ದರೆ ಸಹಕಾರಿ ಸಂಘಗಳಿಗೂ ಆರ್ಥಿಕ ವ್ಯವಹಾರ ನಿರ್ವಹಣೆ ಮಾಡಲು ಕಷ್ಟವಿದೆ. ಹೀಗಾಗಿ ಇದು ಸೂಕ್ತ ಸಮಯವಾಗಿದ್ದು ತರಬೇತಿ ನೀಡುವ ಮೂಲಕ ಕನಿಷ್ಠ ಅವರ ಮನೆಯಲ್ಲಾದರೂ ಅಡಿಕೆ ಕೊಯಿಲು, ಔಷಧಿ ಸಿಂಪಡಣೆ ಮಾಡಬಹುದಾಗಿದೆ” ಎಂದು ಹೇಳುತ್ತಾರೆ ಪಂಜ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

2 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

3 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

18 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

20 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

1 day ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 day ago