ಮಡಿಕೇರಿ: ಕೊಡಗು ಜಿಲ್ಲೆಯ ಕರಿಕೆಯಲ್ಲಿ ಮನೆ ಮಾಲಕರು ತಮ್ಮ ಮನೆಗೆ ಅಡಿಕೆ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕಳ್ಳ ಮೃತಪಟ್ಟಿದ್ದಾನೆ. ದೇವಂಗೋಡಿ ಗಣೇಶ್ ಮೃತಪಟ್ಟವ. ಈತ ಈ ಹಿಂದೆ ಕೂಡ ಹಲವು ಮನೆ ಕಳ್ಳತನ ಮಾಡಿ ಸಿಕ್ಕಿಬಿದ್ದು, ಶಿಕ್ಷೆ ಅನುಭವಿಸಿದ್ದ. ಬಿಡುಗಡೆಯಾಗಿ ಬಂದ ನಂತರದಲ್ಲೂ ಈತ ಕಳ್ಳತನ ಮುಂದುವರಿಸಿದ್ದ ಎನ್ನಲಾಗಿದೆ.
ಮಂದೋಡಿ ಮೊಣ್ಣಪ್ಪ ಅವರ ಮನೆಯಲ್ಲಿದ್ದ ಅಡಿಕೆ ದಾಸ್ತಾನನ್ನು ಕದಿಯಲು ಗಣೇಶ್ ಗುರುವಾರ ರಾತ್ರಿ ಮುಂದಾಗಿದ್ದ. ಸದ್ದು ಕೇಳಿ ಹೊರಬಂದ ಮಂಡೇಡಿ ಮೊಣ್ಣಪ್ಪ ಅವರ ಮನೆಯವರು ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭಾಗಮಂಡಲ ಪೊಲೀಸರ ಭೇಟಿ ನೀಡಿದ್ದಾರೆ. ಗಣೇಶ್ ಮೇಲೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿತ್ತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…