ಪುತ್ತೂರು: ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಸಿದ್ಧತೆ ನಡೆಸುತ್ತಿದೆ. ಲಾಕ್ಡೌನ್ ಸಂದರ್ಭ ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ಅಂಗಡಿಗಳು ಬಂದ್ ಆಗಿತ್ತು. ಇದೀಗ ಅಡಿಕೆ ಬೆಳೆಗಾರರಿಗೆ ಹಿತರಕ್ಷಣೆಗೆ ಮುಂದಾಗಿರುವ ಕ್ಯಾಂಪ್ಕೋ ಈಗ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ ಅವರು ಸಭೆ ನಡೆಸಿದರು.
ಸದ್ಯ ಆಯ್ದ ಅಡಿಕೆ ಖರೀದಿ ಕೇಂದ್ರಗಳಲ್ಲಿ ಮಾತ್ರಾ ಅಡಿಕೆ ಖರೀದಿ ನಡೆಸುವುದು ಈ ಬಗ್ಗೆ ಅಧಿಕಾರಿಗಳು ಖರೀದಿ ಕೇಂದ್ರಗಳ ತಪಾಸಣೆ ನಡೆಸುವರು. ಸೋಮವಾರದ ನಂತರ ಅಡಿಕೆ ಖರೀದಿ ನಡೆಯಲಿದೆ. ಅಡಿಕೆ ಬೆಳೆಗಾರರಿಗೆ ತಿಂಗಳಿಗೆ 25000 ರೂಪಾಯಿ ಮೌಲ್ಯದ ಅಡಿಕೆ ಖರೀದಿ ಅಥವಾ 1 ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಯಾವ್ಯಾವ ಕೇಂದ್ರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಹಾಗೂ ಅಡಿಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…