ಪುತ್ತೂರು: ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಸಿದ್ಧತೆ ನಡೆಸುತ್ತಿದೆ. ಲಾಕ್ಡೌನ್ ಸಂದರ್ಭ ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ಅಂಗಡಿಗಳು ಬಂದ್ ಆಗಿತ್ತು. ಇದೀಗ ಅಡಿಕೆ ಬೆಳೆಗಾರರಿಗೆ ಹಿತರಕ್ಷಣೆಗೆ ಮುಂದಾಗಿರುವ ಕ್ಯಾಂಪ್ಕೋ ಈಗ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ ಅವರು ಸಭೆ ನಡೆಸಿದರು.
ಸದ್ಯ ಆಯ್ದ ಅಡಿಕೆ ಖರೀದಿ ಕೇಂದ್ರಗಳಲ್ಲಿ ಮಾತ್ರಾ ಅಡಿಕೆ ಖರೀದಿ ನಡೆಸುವುದು ಈ ಬಗ್ಗೆ ಅಧಿಕಾರಿಗಳು ಖರೀದಿ ಕೇಂದ್ರಗಳ ತಪಾಸಣೆ ನಡೆಸುವರು. ಸೋಮವಾರದ ನಂತರ ಅಡಿಕೆ ಖರೀದಿ ನಡೆಯಲಿದೆ. ಅಡಿಕೆ ಬೆಳೆಗಾರರಿಗೆ ತಿಂಗಳಿಗೆ 25000 ರೂಪಾಯಿ ಮೌಲ್ಯದ ಅಡಿಕೆ ಖರೀದಿ ಅಥವಾ 1 ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಯಾವ್ಯಾವ ಕೇಂದ್ರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಹಾಗೂ ಅಡಿಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…