ಪುತ್ತೂರು: ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಸಿದ್ಧತೆ ನಡೆಸುತ್ತಿದೆ. ಲಾಕ್ಡೌನ್ ಸಂದರ್ಭ ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ಅಂಗಡಿಗಳು ಬಂದ್ ಆಗಿತ್ತು. ಇದೀಗ ಅಡಿಕೆ ಬೆಳೆಗಾರರಿಗೆ ಹಿತರಕ್ಷಣೆಗೆ ಮುಂದಾಗಿರುವ ಕ್ಯಾಂಪ್ಕೋ ಈಗ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ ಅವರು ಸಭೆ ನಡೆಸಿದರು.
ಸದ್ಯ ಆಯ್ದ ಅಡಿಕೆ ಖರೀದಿ ಕೇಂದ್ರಗಳಲ್ಲಿ ಮಾತ್ರಾ ಅಡಿಕೆ ಖರೀದಿ ನಡೆಸುವುದು ಈ ಬಗ್ಗೆ ಅಧಿಕಾರಿಗಳು ಖರೀದಿ ಕೇಂದ್ರಗಳ ತಪಾಸಣೆ ನಡೆಸುವರು. ಸೋಮವಾರದ ನಂತರ ಅಡಿಕೆ ಖರೀದಿ ನಡೆಯಲಿದೆ. ಅಡಿಕೆ ಬೆಳೆಗಾರರಿಗೆ ತಿಂಗಳಿಗೆ 25000 ರೂಪಾಯಿ ಮೌಲ್ಯದ ಅಡಿಕೆ ಖರೀದಿ ಅಥವಾ 1 ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಯಾವ್ಯಾವ ಕೇಂದ್ರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಹಾಗೂ ಅಡಿಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…