ಪುತ್ತೂರು: ಅಡಿಕೆ ಖರೀದಿ ನಡೆಸಲು ಕ್ಯಾಂಪ್ಕೋ ಸಿದ್ಧತೆ ನಡೆಸುತ್ತಿದೆ. ಲಾಕ್ಡೌನ್ ಸಂದರ್ಭ ಅಗತ್ಯ ಸೇವೆ ಹೊರತುಪಡಿಸಿ ಇತರ ಎಲ್ಲಾ ಅಂಗಡಿಗಳು ಬಂದ್ ಆಗಿತ್ತು. ಇದೀಗ ಅಡಿಕೆ ಬೆಳೆಗಾರರಿಗೆ ಹಿತರಕ್ಷಣೆಗೆ ಮುಂದಾಗಿರುವ ಕ್ಯಾಂಪ್ಕೋ ಈಗ ಅಡಿಕೆ ಖರೀದಿ ನಡೆಸಲು ಸಿದ್ಧತೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ, ನಿರ್ದೇಶಕ ಚಣಿಲ ತಿಮ್ಮಪ್ಪ ಶೆಟ್ಟಿ, ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ, ಸಾಜ ರಾಧಾಕೃಷ್ಣ ಆಳ್ವ ಅವರು ಸಭೆ ನಡೆಸಿದರು.
ಸದ್ಯ ಆಯ್ದ ಅಡಿಕೆ ಖರೀದಿ ಕೇಂದ್ರಗಳಲ್ಲಿ ಮಾತ್ರಾ ಅಡಿಕೆ ಖರೀದಿ ನಡೆಸುವುದು ಈ ಬಗ್ಗೆ ಅಧಿಕಾರಿಗಳು ಖರೀದಿ ಕೇಂದ್ರಗಳ ತಪಾಸಣೆ ನಡೆಸುವರು. ಸೋಮವಾರದ ನಂತರ ಅಡಿಕೆ ಖರೀದಿ ನಡೆಯಲಿದೆ. ಅಡಿಕೆ ಬೆಳೆಗಾರರಿಗೆ ತಿಂಗಳಿಗೆ 25000 ರೂಪಾಯಿ ಮೌಲ್ಯದ ಅಡಿಕೆ ಖರೀದಿ ಅಥವಾ 1 ಕ್ವಿಂಟಾಲ್ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಬಗ್ಗೆ ಎರಡು ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಯಾವ್ಯಾವ ಕೇಂದ್ರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಹಾಗೂ ಅಡಿಕೆ ತರುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…