Advertisement
ಸುದ್ದಿಗಳು

ಅಡಿಕೆ ಖರೀದಿಯ ಬಗ್ಗೆ ಕ್ಯಾಂಪ್ಕೋ ಅಧಿಕೃತ ಘೋಷಣೆ | ಎ.13 ರಿಂದ ಆಯ್ದ ಶಾಖೆಗಳಲ್ಲಿ ಅಡಿಕೆ ಖರೀದಿ | ಸದ್ಯಕ್ಕೆ ಅಡಿಕೆ ಬೆಳೆಗಾರರಿಗೆ ಇದೇ ಆತ್ಮವಿಶ್ವಾಸ |

Share

ಪುತ್ತೂರು: ಅಡಿಕೆ ಖರೀದಿ ನಡೆಸುವ ಬಗ್ಗೆ ಕ್ಯಾಂಪ್ಕೋ  ಘೋಷಣೆ ಮಾಡಿದೆ. ಎ.13 ರಿಂದ ಆಯ್ದ ಶಾಖೆಗಳಲ್ಲಿ  ಅಡಿಕೆ ಖರೀದಿ ನಡೆಸಲಿದೆ. ಆದರೆ ಕೆಲವೊಂದು ನಿಯಮಗಳನ್ನು ಅಳವಡಿಸಲಾಗಿದೆ. ದೇಶವೇ ಲಾಕ್ಡೌನ್ ಆಗಿರುವ ಸಂದರ್ಭದಲ್ಲಿ ಅಡಿಕೆ ಮಾರುಕಟ್ಟೆಯೇ ದೇಶದಲ್ಲಿ  ಬಂದ್ ಆಗಿರುವ ಈ ಹಂತದಲ್ಲಿ,  ಅಡಿಕೆ ಬಗ್ಗೆ ಗಾಸಿಪ್ ಗಳೇ ಹೆಚ್ಚಾಗಿರುವ ಈ ಹೊತ್ತಿನಲ್ಲಿ ಕ್ಯಾಂಪ್ಕೋ ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬುವ ಕಾರ್ಯ ಮಾಡಿದೆ ಎನ್ನುವುದು ಬೆಳೆಗಾರರು ಗಮನದಲ್ಲಿರಿಸಿ ಹೆಜ್ಜೆ ಇಡಬೇಕಾಗಿದೆ.

Advertisement
Advertisement
Advertisement
Advertisement

ಅಡಿಕೆ ಖರೀದಿ ಬಗ್ಗೆ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮಾಹಿತಿ ನೀಡಿ, ಆಯ್ದ ಶಾಖೆಗಳಲ್ಲಿ  ಅಡಿಕೆ ಖರೀದಿ ಮಾಡಲಾಗುತ್ತದೆ.ಎ.13 ರಿಂದಲೇ ಅಡಿಕೆ ಖರೀದಿ ಮಾಡಲಾಗುತ್ತದೆ. ಪ್ರತಿದಿನ 20 ಸದಸ್ಯರಿಗೆ ಮಾತ್ರ ಅವಕಾಶವಿದ್ದು ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000 ಮೌಲ್ಯದ ಅಡಿಕೆ ಮಾರಾಟಕ್ಕೆ ಅವಕಾಶ. ಮುಂದೆ ಇತರ ಕಡೆಗಳಲ್ಲಿ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

Advertisement

ಬೆಳೆಗಾರರು  ಆಯಾ ಶಾಖಾಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು. ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 2.00 ರ ವರೆಗೆ ಅಡಿಕೆ ಖರೀದಿ ನಡೆಯುತ್ತದೆ.  ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ, ಕ್ಯಾಂಪ್ಕೊ ಕಾರ್ಡು, ಪಹಣಿ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ  ಮಾಸ್ಕ್  ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು. ಕ್ಯಾಂಪ್ಕೋ ಸದಸ್ಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಎಸ್.ಆರ್.ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಅಡಿಕೆ ಖರೀದಿಸುವ ಶಾಖೆಗಳ ವಿವರ :

Advertisement

ಅಡ್ಯನಡ್ಕ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ದಿನೇಶ್ ಕುಮಾರ್ PH : 8277355840

ಪುತ್ತೂರು
ಕೊಕ್ಕೊ : ಶುಕ್ರವಾರ
ಅಡಿಕೆ : ಸೋಮವಾರ, ಬುಧವಾರ, ಗುರುವಾರ.
ಸಂಪರ್ಕ : ರಾಜೇಶ್ PH.8317494942

Advertisement

ವಿಟ್ಲ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ರಾಜೇಶ್ ಎಂ PH.9947680655

ಸುಳ್ಯ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಶ್ಯಾಮ್ PH. 6360053860

Advertisement

ನಿಂತಿಕಲ್ಲು
ಅಡಿಕೆ ಮಾತ್ರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಶ್ರೀನಿಧಿ : PH.
9663715920

(ಸೂಚನೆ : ದಿನಕ್ಕೆ ಗರಿಷ್ಠ 10 ಟೋಕನ್ ಪಡೆಯಲು ಮಾತ್ರ ಅವಕಾಶ)

Advertisement

ಕಡಬ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಮಹೇಶ್ ಚಂದ್ರ PH. 9483790435.

ಉಪ್ಪಿನಂಗಡಿ
ಅಡಿಕೆ ಮಾತ್ರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಕೃಪೇಶ್ ರೈ PH.9481759830.

Advertisement

ಬೆಳ್ತಂಗಡಿ
ಕೊಕ್ಕೊ : ಸೋಮವಾರ
ಅಡಿಕೆ : ಮಂಗಳವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಉದಯ ಕುಮಾರ್ PH. 9880903258.

ಆಲಂಕಾರು
ಅಡಿಕೆ ಮಾತ್ರ :
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಧನುಷ್ PH.9972321421.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

6 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

6 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

6 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

14 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

15 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

16 hours ago