Advertisement
ಸುದ್ದಿಗಳು

ಅಡಿಕೆ ಖರೀದಿಯ ಬಗ್ಗೆ ಕ್ಯಾಂಪ್ಕೋ ಅಧಿಕೃತ ಘೋಷಣೆ | ಎ.13 ರಿಂದ ಆಯ್ದ ಶಾಖೆಗಳಲ್ಲಿ ಅಡಿಕೆ ಖರೀದಿ | ಸದ್ಯಕ್ಕೆ ಅಡಿಕೆ ಬೆಳೆಗಾರರಿಗೆ ಇದೇ ಆತ್ಮವಿಶ್ವಾಸ |

Share

ಪುತ್ತೂರು: ಅಡಿಕೆ ಖರೀದಿ ನಡೆಸುವ ಬಗ್ಗೆ ಕ್ಯಾಂಪ್ಕೋ  ಘೋಷಣೆ ಮಾಡಿದೆ. ಎ.13 ರಿಂದ ಆಯ್ದ ಶಾಖೆಗಳಲ್ಲಿ  ಅಡಿಕೆ ಖರೀದಿ ನಡೆಸಲಿದೆ. ಆದರೆ ಕೆಲವೊಂದು ನಿಯಮಗಳನ್ನು ಅಳವಡಿಸಲಾಗಿದೆ. ದೇಶವೇ ಲಾಕ್ಡೌನ್ ಆಗಿರುವ ಸಂದರ್ಭದಲ್ಲಿ ಅಡಿಕೆ ಮಾರುಕಟ್ಟೆಯೇ ದೇಶದಲ್ಲಿ  ಬಂದ್ ಆಗಿರುವ ಈ ಹಂತದಲ್ಲಿ,  ಅಡಿಕೆ ಬಗ್ಗೆ ಗಾಸಿಪ್ ಗಳೇ ಹೆಚ್ಚಾಗಿರುವ ಈ ಹೊತ್ತಿನಲ್ಲಿ ಕ್ಯಾಂಪ್ಕೋ ಅಡಿಕೆ ಬೆಳೆಗಾರರಿಗೆ ಧೈರ್ಯ ತುಂಬುವ ಕಾರ್ಯ ಮಾಡಿದೆ ಎನ್ನುವುದು ಬೆಳೆಗಾರರು ಗಮನದಲ್ಲಿರಿಸಿ ಹೆಜ್ಜೆ ಇಡಬೇಕಾಗಿದೆ.

ಅಡಿಕೆ ಖರೀದಿ ಬಗ್ಗೆ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಮಾಹಿತಿ ನೀಡಿ, ಆಯ್ದ ಶಾಖೆಗಳಲ್ಲಿ  ಅಡಿಕೆ ಖರೀದಿ ಮಾಡಲಾಗುತ್ತದೆ.ಎ.13 ರಿಂದಲೇ ಅಡಿಕೆ ಖರೀದಿ ಮಾಡಲಾಗುತ್ತದೆ. ಪ್ರತಿದಿನ 20 ಸದಸ್ಯರಿಗೆ ಮಾತ್ರ ಅವಕಾಶವಿದ್ದು ಒಬ್ಬ ಸದಸ್ಯರಿಗೆ ಒಂದು ತಿಂಗಳಲ್ಲಿ ಗರಿಷ್ಠ 1 ಕ್ವಿಂಟಾಲ್ ಅಥವಾ ರೂ.25,000 ಮೌಲ್ಯದ ಅಡಿಕೆ ಮಾರಾಟಕ್ಕೆ ಅವಕಾಶ. ಮುಂದೆ ಇತರ ಕಡೆಗಳಲ್ಲಿ ಅಡಿಕೆ ಖರೀದಿ ನಡೆಸುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ಬೆಳೆಗಾರರು  ಆಯಾ ಶಾಖಾಧಿಕಾರಿಗಳ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಟೋಕನ್ ಪಡೆದುಕೊಳ್ಳತಕ್ಕದ್ದು. ಬೆಳಿಗ್ಗೆ ಗಂಟೆ 9.00 ರಿಂದ ಮಧ್ಯಾಹ್ನ 2.00 ರ ವರೆಗೆ ಅಡಿಕೆ ಖರೀದಿ ನಡೆಯುತ್ತದೆ.  ಸದಸ್ಯರು ಆಯಾ ಶಾಖೆಗಳಿಗೆ ಬರುವಾಗ ಕ್ಯಾಂಪ್ಕೊ ಸದಸ್ಯತ್ವದ ಗುರುತು ಚೀಟಿ, ಕ್ಯಾಂಪ್ಕೊ ಕಾರ್ಡು, ಪಹಣಿ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಳ್ಳುವುದರ ಜತೆಗೆ ಕಡ್ಡಾಯವಾಗಿ  ಮಾಸ್ಕ್  ಹಾಕಿಕೊಂಡು ಕನಿಷ್ಠ 3 ಅಡಿಗಳ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದ್ದು. ಕ್ಯಾಂಪ್ಕೋ ಸದಸ್ಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಎಸ್.ಆರ್.ಸತೀಶ್ಚಂದ್ರ ಮಾಹಿತಿ ನೀಡಿದ್ದಾರೆ.

ಅಡಿಕೆ ಖರೀದಿಸುವ ಶಾಖೆಗಳ ವಿವರ :

ಅಡ್ಯನಡ್ಕ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ದಿನೇಶ್ ಕುಮಾರ್ PH : 8277355840

ಪುತ್ತೂರು
ಕೊಕ್ಕೊ : ಶುಕ್ರವಾರ
ಅಡಿಕೆ : ಸೋಮವಾರ, ಬುಧವಾರ, ಗುರುವಾರ.
ಸಂಪರ್ಕ : ರಾಜೇಶ್ PH.8317494942

ವಿಟ್ಲ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ರಾಜೇಶ್ ಎಂ PH.9947680655

ಸುಳ್ಯ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಶ್ಯಾಮ್ PH. 6360053860

ನಿಂತಿಕಲ್ಲು
ಅಡಿಕೆ ಮಾತ್ರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಶ್ರೀನಿಧಿ : PH.
9663715920

(ಸೂಚನೆ : ದಿನಕ್ಕೆ ಗರಿಷ್ಠ 10 ಟೋಕನ್ ಪಡೆಯಲು ಮಾತ್ರ ಅವಕಾಶ)

ಕಡಬ
ಕೊಕ್ಕೊ : ಗುರುವಾರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಮಹೇಶ್ ಚಂದ್ರ PH. 9483790435.

ಉಪ್ಪಿನಂಗಡಿ
ಅಡಿಕೆ ಮಾತ್ರ
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಕೃಪೇಶ್ ರೈ PH.9481759830.

ಬೆಳ್ತಂಗಡಿ
ಕೊಕ್ಕೊ : ಸೋಮವಾರ
ಅಡಿಕೆ : ಮಂಗಳವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಉದಯ ಕುಮಾರ್ PH. 9880903258.

ಆಲಂಕಾರು
ಅಡಿಕೆ ಮಾತ್ರ :
ಅಡಿಕೆ : ಸೋಮವಾರ, ಬುಧವಾರ, ಶುಕ್ರವಾರ.
ಸಂಪರ್ಕ : ಧನುಷ್ PH.9972321421.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

8 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

22 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

22 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

23 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago