ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ ಅಡಿಕೆ ಖರೀದಿ ನಡೆಸಲಾಗಿದೆ. 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸಲಾಗಿದ್ದು ಹೊಸ ಅಡಿಕೆ 250 ರೂಪಾಯಿ ಹಾಗೂ ಹಳೆ ಅಡಿಕೆ 275 ರೂಪಾಯಿಯಲ್ಲಿ ಖರೀದಿ ಮಾಡಲಾಗಿದೆ.
ಅಡಿಕೆ ಮಾರಾಟ ಹಾಗೂ ಖರೀದಿಯೇ ಇಲ್ಲದ ಸಮಯದಲ್ಲಿ ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿರುವ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಪುತ್ತೂರಿನಲ್ಲಿ ಅಡಿಕೆ ಮಾರಾಟ ಮಾಡಿರುವ ಅಡಿಕೆ ಬೆಳೆಗಾರ ಉದಯಶಂಕರ್, ಅಡಿಕೆಯನ್ನೇ ನಂಬಿರುವ ಅಡಿಕೆ ಬೆಳೆಗಾರರಿಗೆ ಇಂತಹ ಸಂದರ್ಭದಲ್ಲಿ ಕ್ಯಾಂಪ್ಕೋ ಮಾಡಿರುವ ಪ್ರಯತ್ನ ಶ್ಲಾಘನೀಯ. ತುರ್ತು ಸಂದರ್ಭಕ್ಕೆ ಅಗತ್ಯವಾದ ಹಣ ಲಭ್ಯವಾಗಿದೆ. ಇದರಿಂದ ನೆಮ್ಮದಿಯಾಗಿದೆ ಎಂದು ಹೇಳಿದ್ದಾರೆ.
ಅಡಿಕೆ ಬೆಳೆಗಾರ ದೇವಣ್ಣ ಗೌಡ ಮಾತನಾಡಿ , ಈಗಿನ ಪರಿಸ್ಥಿತಿಯಲ್ಲಿ ಕ್ಯಾಂಪ್ಕೋ ಉತ್ತಮ ಧಾರಣೆ ನೀಡಿದೆ. ಇದು ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಹಾಗೂ ಧೈರ್ಯ ತರುತ್ತದೆ ಎಂದು ಹೇಳುತ್ತಾರೆ.
ಅಡಿಕೆ ಖರೀದಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಯತ್ನ ಹಾಗೂ ಯೋಜನೆಗಳ ಬಗ್ಗೆ ಪ್ರಯತ್ನ ಮಾಡಲಾಗುವುದು. ಸಾಗಾಟದ ಬಗ್ಗೆಯೂ ಪ್ರಯತ್ನ ಮಾಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490