Advertisement
ಸುದ್ದಿಗಳು

ಅಡಿಕೆ ಖರೀದಿಸಿದ ಕ್ಯಾಂಪ್ಕೋ | ಎಲ್ಲಾ ಶಾಖೆಗಳಲ್ಲೂ ನಿಗದಿತ ಸಮಯದಲ್ಲಿ ಅಡಿಕೆ ಖರೀದಿ| ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ |

Share

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ  ಅಡಿಕೆ ಖರೀದಿ ನಡೆಸಲಾಗಿದೆ.  25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸಲಾಗಿದ್ದು ಹೊಸ ಅಡಿಕೆ 250  ರೂಪಾಯಿ ಹಾಗೂ ಹಳೆ ಅಡಿಕೆ 275 ರೂಪಾಯಿಯಲ್ಲಿ ಖರೀದಿ ಮಾಡಲಾಗಿದೆ.

ಅಡಿಕೆ ಮಾರಾಟ ಹಾಗೂ ಖರೀದಿಯೇ ಇಲ್ಲದ ಸಮಯದಲ್ಲಿ ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿರುವ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪುತ್ತೂರಿನಲ್ಲಿ ಅಡಿಕೆ ಮಾರಾಟ ಮಾಡಿರುವ ಅಡಿಕೆ ಬೆಳೆಗಾರ ಉದಯಶಂಕರ್, ಅಡಿಕೆಯನ್ನೇ ನಂಬಿರುವ ಅಡಿಕೆ ಬೆಳೆಗಾರರಿಗೆ ಇಂತಹ ಸಂದರ್ಭದಲ್ಲಿ  ಕ್ಯಾಂಪ್ಕೋ ಮಾಡಿರುವ ಪ್ರಯತ್ನ ಶ್ಲಾಘನೀಯ. ತುರ್ತು ಸಂದರ್ಭಕ್ಕೆ ಅಗತ್ಯವಾದ ಹಣ ಲಭ್ಯವಾಗಿದೆ. ಇದರಿಂದ ನೆಮ್ಮದಿಯಾಗಿದೆ ಎಂದು ಹೇಳಿದ್ದಾರೆ.

ಅಡಿಕೆ ಬೆಳೆಗಾರ ದೇವಣ್ಣ ಗೌಡ ಮಾತನಾಡಿ , ಈಗಿನ ಪರಿಸ್ಥಿತಿಯಲ್ಲಿ ಕ್ಯಾಂಪ್ಕೋ ಉತ್ತಮ ಧಾರಣೆ ನೀಡಿದೆ. ಇದು ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಹಾಗೂ ಧೈರ್ಯ ತರುತ್ತದೆ ಎಂದು  ಹೇಳುತ್ತಾರೆ.

ಅಡಿಕೆ ಖರೀದಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ  ಇನ್ನಷ್ಟು ಪ್ರಯತ್ನ ಹಾಗೂ ಯೋಜನೆಗಳ ಬಗ್ಗೆ ಪ್ರಯತ್ನ ಮಾಡಲಾಗುವುದು.  ಸಾಗಾಟದ ಬಗ್ಗೆಯೂ ಪ್ರಯತ್ನ ಮಾಡಲಾಗುವುದು  ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

2 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

2 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

14 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago