ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ ಅಡಿಕೆ ಖರೀದಿ ನಡೆಸಲಾಗಿದೆ. 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸಲಾಗಿದ್ದು ಹೊಸ ಅಡಿಕೆ 250 ರೂಪಾಯಿ ಹಾಗೂ ಹಳೆ ಅಡಿಕೆ 275 ರೂಪಾಯಿಯಲ್ಲಿ ಖರೀದಿ ಮಾಡಲಾಗಿದೆ.
ಅಡಿಕೆ ಮಾರಾಟ ಹಾಗೂ ಖರೀದಿಯೇ ಇಲ್ಲದ ಸಮಯದಲ್ಲಿ ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿರುವ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಪುತ್ತೂರಿನಲ್ಲಿ ಅಡಿಕೆ ಮಾರಾಟ ಮಾಡಿರುವ ಅಡಿಕೆ ಬೆಳೆಗಾರ ಉದಯಶಂಕರ್, ಅಡಿಕೆಯನ್ನೇ ನಂಬಿರುವ ಅಡಿಕೆ ಬೆಳೆಗಾರರಿಗೆ ಇಂತಹ ಸಂದರ್ಭದಲ್ಲಿ ಕ್ಯಾಂಪ್ಕೋ ಮಾಡಿರುವ ಪ್ರಯತ್ನ ಶ್ಲಾಘನೀಯ. ತುರ್ತು ಸಂದರ್ಭಕ್ಕೆ ಅಗತ್ಯವಾದ ಹಣ ಲಭ್ಯವಾಗಿದೆ. ಇದರಿಂದ ನೆಮ್ಮದಿಯಾಗಿದೆ ಎಂದು ಹೇಳಿದ್ದಾರೆ.
ಅಡಿಕೆ ಬೆಳೆಗಾರ ದೇವಣ್ಣ ಗೌಡ ಮಾತನಾಡಿ , ಈಗಿನ ಪರಿಸ್ಥಿತಿಯಲ್ಲಿ ಕ್ಯಾಂಪ್ಕೋ ಉತ್ತಮ ಧಾರಣೆ ನೀಡಿದೆ. ಇದು ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಹಾಗೂ ಧೈರ್ಯ ತರುತ್ತದೆ ಎಂದು ಹೇಳುತ್ತಾರೆ.
ಅಡಿಕೆ ಖರೀದಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಯತ್ನ ಹಾಗೂ ಯೋಜನೆಗಳ ಬಗ್ಗೆ ಪ್ರಯತ್ನ ಮಾಡಲಾಗುವುದು. ಸಾಗಾಟದ ಬಗ್ಗೆಯೂ ಪ್ರಯತ್ನ ಮಾಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…