ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಖೆಗಳಲ್ಲಿ ಕ್ಯಾಂಪ್ಕೋ ಸೋಮವಾರ ಅಡಿಕೆ ಖರೀದಿ ನಡೆಸಿದೆ. ಎಲ್ಲಾ ಶಾಖೆಗಳಲ್ಲಿ ಟೋಕನ್ ವ್ಯವಸ್ಥೆಯಲ್ಲಿ ನಿಗದಿತ ಸಮಯದಲ್ಲಿ ಸದಸ್ಯ ಬೆಳೆಗಾರರಿಂದ ಅಡಿಕೆ ಖರೀದಿ ನಡೆಸಲಾಗಿದೆ. 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಖರೀದಿ ನಡೆಸಲಾಗಿದ್ದು ಹೊಸ ಅಡಿಕೆ 250 ರೂಪಾಯಿ ಹಾಗೂ ಹಳೆ ಅಡಿಕೆ 275 ರೂಪಾಯಿಯಲ್ಲಿ ಖರೀದಿ ಮಾಡಲಾಗಿದೆ.
ಅಡಿಕೆ ಮಾರಾಟ ಹಾಗೂ ಖರೀದಿಯೇ ಇಲ್ಲದ ಸಮಯದಲ್ಲಿ ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿರುವ ಕ್ಯಾಂಪ್ಕೋ ಆಡಳಿತ ಮಂಡಳಿಗೆ ಬೆಳೆಗಾರರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಪುತ್ತೂರಿನಲ್ಲಿ ಅಡಿಕೆ ಮಾರಾಟ ಮಾಡಿರುವ ಅಡಿಕೆ ಬೆಳೆಗಾರ ಉದಯಶಂಕರ್, ಅಡಿಕೆಯನ್ನೇ ನಂಬಿರುವ ಅಡಿಕೆ ಬೆಳೆಗಾರರಿಗೆ ಇಂತಹ ಸಂದರ್ಭದಲ್ಲಿ ಕ್ಯಾಂಪ್ಕೋ ಮಾಡಿರುವ ಪ್ರಯತ್ನ ಶ್ಲಾಘನೀಯ. ತುರ್ತು ಸಂದರ್ಭಕ್ಕೆ ಅಗತ್ಯವಾದ ಹಣ ಲಭ್ಯವಾಗಿದೆ. ಇದರಿಂದ ನೆಮ್ಮದಿಯಾಗಿದೆ ಎಂದು ಹೇಳಿದ್ದಾರೆ.
ಅಡಿಕೆ ಬೆಳೆಗಾರ ದೇವಣ್ಣ ಗೌಡ ಮಾತನಾಡಿ , ಈಗಿನ ಪರಿಸ್ಥಿತಿಯಲ್ಲಿ ಕ್ಯಾಂಪ್ಕೋ ಉತ್ತಮ ಧಾರಣೆ ನೀಡಿದೆ. ಇದು ಅಡಿಕೆ ಬೆಳೆಗಾರರಿಗೆ ಆತ್ಮವಿಶ್ವಾಸ ಹಾಗೂ ಧೈರ್ಯ ತರುತ್ತದೆ ಎಂದು ಹೇಳುತ್ತಾರೆ.
ಅಡಿಕೆ ಖರೀದಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಯತ್ನ ಹಾಗೂ ಯೋಜನೆಗಳ ಬಗ್ಗೆ ಪ್ರಯತ್ನ ಮಾಡಲಾಗುವುದು. ಸಾಗಾಟದ ಬಗ್ಗೆಯೂ ಪ್ರಯತ್ನ ಮಾಡಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…