Advertisement
ಸುದ್ದಿಗಳು

ಅಡಿಕೆ ಖರೀದಿ ಆರಂಭ : ಅಡಿಕೆ ಬೆಳೆಗಾರರ ಸಂಘದಿಂದ ಕ್ಯಾಂಪ್ಕೋಗೆ ಕೃತಜ್ಞತೆ

Share

ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಮುಂದಾಗಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ನೈತಿಕ ಧೈರ್ಯ ತುಂಬಿದೆ. ಇದಕ್ಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕ್ಯಾಂಪ್ಕೋಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ  ತಿಳಿಸಿದ್ದಾರೆ.

Advertisement
Advertisement
Advertisement
Advertisement

ಲಾಕ್ಡೌನ್ ಸಂದರ್ಭ ಎಲ್ಲಿಯೂ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿಲ್ಲ. ದಕ್ಷಿಣ ಕನ್ನಡ , ಕಾಸರಗೋಡು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಡಿಕೆಯೇ ಪ್ರಮುಖ ಬೆಳೆಯಾಗಿದೆ. ಅಡಿಕೆ ಬೆಳೆಗಾರರು ಅಡಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಇವರಿಗೆ ಅಡಿಕೆ ಮಾರಾಟ ಮಾಡದೇ ಯಾವುದೇ ವ್ಯವಹಾರ ಮಾಡಲು ಕಷ್ಟದ ಸನ್ನಿವೇಶ ಇತ್ತು. ಇದರ ಜೊತೆಗೆ ಉತ್ತರ ಭಾರತದಲ್ಲೂ ಅಡಿಕೆ ಮಾರಾಟ ಆಗದ ಸ್ಥಿತಿ ಕಂಡುಬಂದಿತ್ತು. ಬೇಡಿಕೆ ಇದ್ದರೂ ಪೂರೈಕೆ ಕಷ್ಟದ ಸ್ಥಿತಿ ಇದೆ.

Advertisement

ಮುಂದಿನ ದಿನಗಳಲ್ಲಿ ಇತರ ಎಲ್ಲಾ ಕೃಷಿ ಉತ್ಪನ್ನ ಖರೀದಿಗೆ ಅನುಕೂಲ ವಾತಾವರಣವನ್ನು ಆಡಳಿತ ಹಾಗೂ ಸಹಕಾರ ಸಂಘಗಳಿಂದ ಸೃಷ್ಟಿಯಾಗುವಂತಾಗಬೇಕು ಹಾಗೂ ಗ್ರಾಮೀಣ ಭಾಗದಲ್ಲೂ ಅಡಿಕೆ ಖರೀದಿ ಕೇಂದ್ರದ ಕ್ಯಾಂಪ್ಕೋ ಶಾಖೆಗಳಲ್ಲಿ ಕನಿಷ್ಟ ಒಂದು ದಿನದ ವ್ಯವಸ್ಥೆಯಾಗಬೇಕು ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

23 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago